alex Certify ಬಾಡಿಗೆದಾರನನ್ನು ಹತ್ಯೆ ಮಾಡಿ ಪೀಸ್ ಪೀಸ್ ಮಾಡಿದ ಬಳಿಕ ಕಾಲುವೆಗೆ ಎಸೆದ ಮಾಲೀಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಾಡಿಗೆದಾರನನ್ನು ಹತ್ಯೆ ಮಾಡಿ ಪೀಸ್ ಪೀಸ್ ಮಾಡಿದ ಬಳಿಕ ಕಾಲುವೆಗೆ ಎಸೆದ ಮಾಲೀಕ

ಹತ್ಯೆ ಮಾಡಿ ಶವವನ್ನು ತುಂಡರಿಸಿ ಎಸೆಯುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗಿ ಬಯಲಾಗ್ತಿವೆ. ಈ ಸಾಲಿಗೆ ಮತ್ತೊಂದು ಪ್ರಕರಣ ಸೇರಿದ್ದು ಉತ್ತರ ಪ್ರದೇಶದಲ್ಲಿ ವರದಿಯಾಗಿದೆ. ಬಾಡಿಗೆದಾರರನ್ನು ಮನೆ ಮಾಲೀಕ ಹತ್ಯೆ ಮಾಡಿರುವ ಪ್ರಕರಣದಲ್ಲಿ ಗಾಜಿಯಾಬಾದ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಎರಡು ತಿಂಗಳ ಹಿಂದೆ ನಡೆದ ಕೊಲೆ ಪ್ರಕರಣದಲ್ಲಿ, ತನ್ನ ಬಾಡಿಗೆದಾರ ಅಂಕಿತ್ ಖೋಕರ್‌ನನ್ನು ಕೊಂದು ಅವನ ದೇಹವನ್ನು ತುಂಡುಗಳಾಗಿ ಕತ್ತರಿಸಿ ಕಾಲುವೆಗೆ ಎಸೆದಿದ್ದ. ಈ ಆರೋಪದ ಮೇಲೆ ಯುಪಿಯ ಗಾಜಿಯಾಬಾದ್ ಜಿಲ್ಲೆಯ ಮೋದಿನಗರದಿಂದ ಉಮೇಶ್ ಶರ್ಮಾ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಹತ್ಯೆಗೀಡಾದ ಅಂಕಿತ್ ಖೋಕರ್ ಕೆಲವು ವರ್ಷಗಳ ಹಿಂದೆ ಅವರ ಪೋಷಕರು ನಿಧನರಾದಾಗಿನಿಂದ ಒಬ್ಬಂಟಿಯಾಗಿ ವಾಸಿಸುತ್ತಿದ್ದರು. ಮತ್ತು ಲಕ್ನೋದ ವಿಶ್ವವಿದ್ಯಾಲಯದಲ್ಲಿ ಪಿಎಚ್‌ಡಿ ವಿದ್ವಾಂಸರಾಗಿದ್ದರು.

ಅಂಕಿತ್ ಖೋಕರ್ ಇತ್ತೀಚೆಗೆ ಬಾಗ್‌ಪತ್‌ನಲ್ಲಿರುವ ತನ್ನ ಪೂರ್ವಜರ ಜಮೀನನ್ನು ಮಾರಾಟ ಮಾಡಿ ಅದರಿಂದ ₹ 1 ಕೋಟಿ ಸಿಕ್ಕಿತ್ತು. ಇದರ ಮೇಲೆ ಕೊಲೆಗಾರ ಕಣ್ಣಿಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಪರ್ವೇಶ್ ಎಂದು ಗುರುತಿಸಲಾದ ಹಂತಕನ ಸ್ನೇಹಿತನನ್ನು ಸಹ ಪ್ರಕರಣದಲ್ಲಿ ಬಂಧಿಸಲಾಗಿದೆ.

ಸ್ನೇಹಿತರ ಕರೆಗಳಿಗೆ ಅಂಕಿತ್ ಖೋಕರ್ ವಾರಗಟ್ಟಲೆ ಕರೆಗಳಿಗೆ ಉತ್ತರಿಸದೇ ಇದ್ದಾಗ ಅನುಮಾನಗೊಂಡ ಆತನ ಸ್ನೇಹಿತರು ಆತನನ್ನು ಹುಡುಕಲು ಪ್ರಯತ್ನಿಸಿದ ನಂತರ ಪೊಲೀಸರಿಗೆ ದೂರು ನೀಡಿದ್ದರು.

ಕೆಲವು ದಿನದ ನಂತರ ಅಂಕಿತ್ ಫೋನ್ ನಿಂದ ಸಂದೇಶಗಳನ್ನು ಸ್ವೀಕರಿಸಲು ಪ್ರಾರಂಭಿಸಿದಾಗ, ಸಂಭಾಷಣೆಯ ಶೈಲಿಯು ಅವರದಲ್ಲ ಎಂದು ಗೊತ್ತಾದ ಮೇಲೆ ಅನುಮಾನ ದಟ್ಟವಾಯಿತು.

ಅಕ್ಟೋಬರ್ 6 ರಂದು ಅಂಕಿತ್ ಖೋಕರ್ ಅವರನ್ನು ಆರೋಪಿ ಉಮೇಶ್ ಶರ್ಮಾ ಕತ್ತು ಹಿಸುಕಿ ಕೊಂದಿರೋದು ತನಿಖೆಯಲ್ಲಿ ಬಯಲಾಗಿದೆ.

ಗರಗಸದಿಂದ ದೇಹವನ್ನು ಕನಿಷ್ಠ ಮೂರು ಭಾಗಗಳಾಗಿ ಕತ್ತರಿಸಿ ಅವುಗಳನ್ನು ಅಲ್ಯೂಮಿನಿಯಂ ಫಾಯಿಲ್‌ನಲ್ಲಿ ಪ್ಯಾಕ್ ಮಾಡಿ, ಒಂದು ಭಾಗವನ್ನು ಮುಜಾಫರ್‌ನಗರದ ಖತೌಲಿಯಲ್ಲಿ ಕಾಲುವೆಯಲ್ಲಿ, ಇನ್ನೊಂದು ಭಾಗವನ್ನು ಮಸ್ಸೂರಿ ಕಾಲುವೆಯಲ್ಲಿ ಮತ್ತು ಒಂದು ಭಾಗವನ್ನು ಎಕ್ಸ್ ಪ್ರೆಸ್‌ವೇನಲ್ಲಿ ಸುರಿದಿದ್ದ ಎಂದು ಆರೋಪಿಸಲಾಗಿದೆ.ತನಿಖೆಯಲ್ಲಿ ಮೃತದೇಹದ ಭಾಗಗಳು ಪತ್ತೆಯಾಗಬೇಕಿವೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...