alex Certify BIG NEWS: ಹಾವು ಕಡಿತಕ್ಕೊಳಗಾಗಿ ಸಾವನ್ನಪ್ಪಿದ್ದ ಸಹೋದರನ ಅಂತ್ಯ ಸಂಸ್ಕಾರಕ್ಕೆ ಬಂದವನೂ ಹಾವು ಕಡಿತದಿಂದಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಾವು ಕಡಿತಕ್ಕೊಳಗಾಗಿ ಸಾವನ್ನಪ್ಪಿದ್ದ ಸಹೋದರನ ಅಂತ್ಯ ಸಂಸ್ಕಾರಕ್ಕೆ ಬಂದವನೂ ಹಾವು ಕಡಿತದಿಂದಲೇ ಸಾವು

ಮನುಷ್ಯನಿಗೆ ಸಾವು ಯಾವ ಸಂದರ್ಭದಲ್ಲಿ, ಯಾವ ರೀತಿ ಬರುತ್ತದೆ ಎಂಬುದನ್ನು ಊಹಿಸಲು ಯಾರಿಗೂ ಆಗುವುದಿಲ್ಲ. ಹಾಗೆ ಇಂತಹ ಅನೇಕ ಘಟನೆಗಳ ಕುರಿತು ವರದಿಯಾಗಿವೆ. ಅಂತಹ ಒಂದು ದುರದೃಷ್ಟಕರ ಘಟನೆಯ ವಿವರ ಇಲ್ಲಿದೆ.

ಪರವೂರಿನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ತನ್ನ ಸಹೋದರ ಹಾವು ಕಡಿತಕ್ಕೊಳಗಾಗಿ ಮೃತಪಟ್ಟ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಬಂದ ವೇಳೆ ಆತನೂ ಸಹ ಹಾವು ಕಚ್ಚಿದ ಪರಿಣಾಮ ಸಾವನ್ನಪ್ಪಿದ್ದಾನೆ. ಈ ಘಟನೆ ಉತ್ತರ ಪ್ರದೇಶದ ಬಲರಾಮಪುರ ಜಿಲ್ಲೆಯ ಭವಾನಿಪುರ ಗ್ರಾಮದಲ್ಲಿ ನಡೆದಿದೆ.

ಭವಾನಿಪುರ ಗ್ರಾಮದ ಗೋವಿಂದ ಮಿಶ್ರಾ ಹಾವು ಕಡಿತದಿಂದ ಸಾವನ್ನಪ್ಪಿದ್ದ ತನ್ನ ಸಹೋದರ ಅರವಿಂದ ಮಿಶ್ರಾನ ಅಂತ್ಯಸಂಸ್ಕಾರಕ್ಕೆ ಲೂಧಿಯಾನದಿಂದ ಬಂದಿದ್ದ. ಈತ ರಾತ್ರಿ ಮಲಗಿದ್ದ ವೇಳೆ ಹಾವು ಕಚ್ಚಿದ್ದು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಾಗಲೇ ಮೃತಪಟ್ಟಿದ್ದಾನೆ.

ಈತನೊಂದಿಗೆ ಅದೇ ಕೋಣೆಯಲ್ಲಿ ಮಲಗಿದ್ದ ಚಂದ್ರಶೇಖರ ಪಾಂಡೆ ಎಂಬಾತನಿಗೂ ಹಾವು ಕಚ್ಚಿದ್ದು, ಚಿಂತಾಜನಕ ಸ್ಥಿತಿಯಲ್ಲಿರುವ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಂದ್ರಶೇಖರ ಪಾಂಡೆ ಸಹ ಲೂಧಿಯಾನಾದಲ್ಲಿ ಕೆಲಸ ಮಾಡುತ್ತಿದ್ದು ಗೋವಿಂದ ಮಿಶ್ರಾ ಜೊತೆ ಅಂತ್ಯ ಸಂಸ್ಕಾರಕ್ಕೆ ಆಗಮಿಸಿದ್ದ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...