alex Certify ಉತ್ತರ ಪ್ರದೇಶದಲ್ಲಿ ಮತ್ತೊಂದು ಆಘಾತಕಾರಿ ಘಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉತ್ತರ ಪ್ರದೇಶದಲ್ಲಿ ಮತ್ತೊಂದು ಆಘಾತಕಾರಿ ಘಟನೆ

ಲಖ್ನೋ: ಉತ್ತರ ಪ್ರದೇಶದಲ್ಲಿ ನಡೆದ ಮತ್ತೊಂದು ಆಘಾತಕಾರಿ ಘಟನೆಯಲ್ಲಿ ನೋಯ್ಡಾದ ಆಸ್ಪತ್ರೆಯ ಹೊರಗೆ ಆಂಬುಲೆನ್ಸ್ ನಲ್ಲಿ 14 ವರ್ಷದ ಬಾಲಕಿ ಶವವಾಗಿ ಪತ್ತೆಯಾಗಿದ್ದಾಳೆ. ಇಬ್ಬರು ಅಪರಿಚಿತರು ಆಕೆಯನ್ನು ಬಿಟ್ಟು ಹೋಗಿದ್ದಾರೆ.

ಹಾಪೂರ್ ಜಿಲ್ಲೆಯಿಂದ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಲಾಗಿದ್ದು, ಈ ಬಗ್ಗೆ ನೋಯ್ಡಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹಾಪೂರ್ ಜಿಲ್ಲೆಯಲ್ಲಿ ಬಾಲಕಿಯ ಕುಟುಂಬ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣದ ತನಿಖೆ ಪ್ರತ್ಯೇಕವಾಗಿ ನಡೆಯುತ್ತಿದೆ. ಮಾರ್ಚ್ 31 ರಂದು ಇಬ್ಬರು ಆಕೆಯನ್ನು ಅಪಹರಿಸಿದ್ದಾರೆ. ಬಾಲಕಿ ಪೋಷಕರು ದೂರು ನೀಡಿದ್ದಾರೆ. ಇತ್ತ ಬಾಲಕಿಯನ್ನು ಆಸ್ಪತ್ರೆಗೆ ಕರೆತಂದ ಅಪರಿಚಿತರು ಹಣ ತರುವ ನೆಪದಲ್ಲಿ ಸ್ಥಳದಿಂದ ಹೊರಟು ಹೋಗಿದ್ದಾರೆ ಎಂದು ನೋಯ್ಡಾದ ಲೋಕಲ್ ಸೆಕ್ಟರ್ 24 ಪೋಲಿಸ್ ಠಾಣೆಗೆ ಆಸ್ಪತ್ರೆಯ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

ನೋಯ್ಡಾ ಹೆಚ್ಚುವರಿ ಜಿಲ್ಲಾಧಿಕಾರಿ ರಣವಿಜಯ ಸಿಂಗ್ ಅವರು ಬಾಲಕಿ ಮೃತಪಟ್ಟಿರುವುದಾಗಿ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಮೃತದೇಹವನ್ನು ಪೊಲೀಸ್ ವಶಕ್ಕೆ ನೀಡಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ. ಆಸ್ಪತ್ರೆಗೆ ಕರೆತಂದು ಬಿಟ್ಟು ಹೋದವರ ಪತ್ತೆಗಾಗಿ ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ನಡೆಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...