alex Certify ಅಪ್ರಾಪ್ತರಿಂದ ಆಘಾತಕಾರಿ ಕೃತ್ಯ: ಯುವತಿ ಅಪಹರಿಸಿ ಗ್ಯಾಂಗ್ ರೇಪ್, ನದಿಗೆ ಎಸೆದು ಕೊಲೆಗೆ ಯತ್ನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಪ್ರಾಪ್ತರಿಂದ ಆಘಾತಕಾರಿ ಕೃತ್ಯ: ಯುವತಿ ಅಪಹರಿಸಿ ಗ್ಯಾಂಗ್ ರೇಪ್, ನದಿಗೆ ಎಸೆದು ಕೊಲೆಗೆ ಯತ್ನ

ಬಸ್ತಿ: ಉತ್ತರ ಪ್ರದೇಶ ಪೂರ್ವ ಭಾಗದಲ್ಲಿರುವ ಬಸ್ತಿ ಜಿಲ್ಲೆಯಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ 21 ವರ್ಷದ ಹುಡುಗಿಯನ್ನು ಅಪಹರಿಸಿದ ಅಪ್ರಾಪ್ತರಿಬ್ಬರು ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆಗೆ ಯತ್ನಿಸಿದ್ದಾರೆ.‌

ಭದೇಶ್ವರನಾಥ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಕೃತ್ಯಕ್ಕೆ ಯುವತಿ ಪ್ರತಿರೋಧ ವ್ಯಕ್ತಪಡಿಸಿದಾಗ ಆಕೆಯನ್ನು ಥಳಿಸಿದ ಆರೋಪಿಗಳು ಆಕೆಯನ್ನು ನದಿಗೆ ಎಸೆದು ಕೊಲೆ ಮಾಡಲು ಯತ್ನಿಸಿದ್ದಾರೆ. ಆರೋಪಿಗಳಿಬ್ಬರೂ ಅಪ್ರಾಪ್ತರಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಮೇ 26 ರಂದು ರಾತ್ರಿ ಮೋಟಾರ್ ಬೈಕ್ ನಲ್ಲಿ ಬಂದ ಇಬ್ಬರು ಹುಡುಗರು ತಮ್ಮ ಮಗಳನ್ನು ಅಪಹರಿಸಿದ್ದಾರೆ ಎಂದು ಶುಕ್ರವಾರ ಬಾಲಕಿಯ ತಂದೆ ದೂರು ನೀಡಿದ್ದಾರೆ. ನಂತರ, ಆರೋಪಿಗಳು ಭದೇಶ್ವರನಾಥದ ಮೋಹ್ತಾ ಘಾಟ್ ಬಳಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಆರೋಪಿಗಳು ಬಾಲಕಿಯ ಮೊಬೈಲ್ ಕಸಿದುಕೊಂಡು ನದಿಗೆ ತಳ್ಳಿ ಕೊಲೆ ಮಾಡಲು ಯತ್ನಿಸಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...