alex Certify ಬೆಚ್ಚಿಬೀಳಿಸುವಂತಿದೆ ತರಕಾರಿ ಮಾರಾಟಗಾರ ಮಾಡಿರುವ ಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಚ್ಚಿಬೀಳಿಸುವಂತಿದೆ ತರಕಾರಿ ಮಾರಾಟಗಾರ ಮಾಡಿರುವ ಕೃತ್ಯ

ಉತ್ತರ ಪ್ರದೇಶದ ತರಕಾರಿ ಮಾರಾಟಗಾರನೊಬ್ಬ ತನ್ಮ ಗಾಡಿಯಲ್ಲಿ ಇಟ್ಟಿದ್ದ ತರಕಾರಿಗಳನ್ನು ಗ್ರಾಹಕರಿಗೆ ಮಾರಾಟ ಮಾಡುವ ಮುನ್ನ ಉಗುಳುವುದು ಮತ್ತು ಮೂತ್ರ ವಿಸರ್ಜನೆ ಮಾಡುತ್ತಿರುವುದು ಕ್ಯಾಮರಾದಲ್ಲಿ ಸೆರೆಯಾಗಿರುವ ವಿಲಕ್ಷಣ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.

ಈ ಘಟನೆ ಬರೇಲಿಯ ಇಜ್ಜತ್​ನಗರ ಪ್ರದೇಶದಲ್ಲಿ ನಡೆದಿದೆ. ತನ್ನ ಕಾರಿನೊಳಗೆ ಕುಳಿತಿದ್ದ ವ್ಯಕ್ತಿಯೊಬ್ಬರು ಈ ಆಘಾತಕಾರಿ ದೃಶ್ಯವನ್ನು ಚಿತ್ರೀಕರಿಸಿದ್ದಾರೆ.

ವಿಡಿಯೋ ರೆಕಾರ್ಡ್​ ಮಾಡಿರುವ ವ್ಯಕ್ತಿ ದುರ್ಗೇಶ್​ ಗುಪ್ತಾ ನಗರದಲ್ಲಿ ವಾಸವಾಗಿದ್ದು, ಕೆಲಸದ ನಿಮಿತ್ತ ಕಾರಿನಲ್ಲಿ ತೆರಳಿದ್ದರು.

ಷರೀಫ್​ ಖಾನ್​ ಎಂದು ಗುರುತಿಸಲಾದ ತರಕಾರಿ ಮಾರಾಟಗಾರ ತರಕಾರಿಗಳ ಮೇಲೆ ಮೂತ್ರ ವಿಸರ್ಜಿಸುವುದನ್ನು ಅವರು ಗಮನಿಸಿದ್ದಾರೆ ತಕ್ಷಣ ಮೊಬೈಲ್​ನಲ್ಲಿ ಆ ದೃಶ್ಯ ಸೆರೆ ಹಿಡಿದಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೆೈರಲ್​ ಆದ ಬಳಿಕ ಪ್ರೇಮ್​ ನಗರ ಪೊಲೀಸ್​ ಠಾಣೆಯಲ್ಲಿ ಎಫ್ಐಆರ್​ ದಾಖಲಾಗಿದೆ. ವರದಿಯ ಪ್ರಕಾರ, ವ್ಯಕ್ತಿಯನ್ನು ಬಂಧಿಸುವ ಮೊದಲು ಸ್ಥಳೀಯರು ಥಳಿಸಿದ್ದಾರೆ. ಪೊಲೀಸರು ಆರೋಪಿಯನ್ನು ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...