
ತುರ್ತು ಸಂದರ್ಭಗಳಲ್ಲಿ 48 ಗಂಟೆಗಳ ಕಾಲ ಉಚಿತ ಚಿಕಿತ್ಸೆ ಸೇರಿದಂತೆ ಆರೋಗ್ಯ ಸೌಲಭ್ಯಗಳಿಗೆ 3,000 ಕೋಟಿ ರೂ.ಗಳನ್ನು ನೀಡಲು ಉತ್ತರ ಪ್ರದೇಶ ಸರ್ಕಾರ ಸಿದ್ಧವಾಗಿದೆ.
ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ರಾಜ್ಯ ಸರ್ಕಾರವು ಈ ಮಹತ್ವದ ಬದಲಾವಣೆ ತರಲಿದೆ. ಆರೋಗ್ಯ ವ್ಯವಸ್ಥೆಯನ್ನು ಸುಧಾರಿಸಲು, ಆರೋಗ್ಯ ಮೂಲಸೌಕರ್ಯಗಳನ್ನು ವಿಸ್ತರಿಸಲು ಮತ್ತು ಅಗತ್ಯವಿರುವವರಿಗೆ ಸರಿಯಾದ ಆರೋಗ್ಯ ಸೌಲಭ್ಯಗಳನ್ನು ಒದಗಿಸಲು ಹಂತ ಹಂತವಾಗಿ ಯೋಜನೆ ಜಾರಿಗೊಳಿಸಲಾಗುವುದು.
ಒಂದು ಜಿಲ್ಲೆ, ಒಂದು ವೈದ್ಯಕೀಯ ಕಾಲೇಜು ಮುಂತಾದ ಯೋಜನೆಗಳ ಮೂಲಕ ರಾಜ್ಯ ಸರ್ಕಾರ 75 ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜುಗಳನ್ನು ನಿರ್ಮಿಸುವ ಮೂಲಕ ಆರೋಗ್ಯ ಕ್ಷೇತ್ರದಲ್ಲಿನ ಭೌಗೋಳಿಕ ಅಸಮಾನತೆಯ ಸಮಸ್ಯೆ ಪರಿಹರಿಸಲು ಪ್ರಯತ್ನಿಸುತ್ತಿದೆ.
ಈಗ, ಲೈವ್ ಎಮರ್ಜೆನ್ಸಿ ಮಾನಿಟರಿಂಗ್ ಸಿಸ್ಟಮ್ ಹೊಂದಿರುವ ಮೊದಲ ರಾಜ್ಯ ಉತ್ತರ ಪ್ರದೇಶವಾಗಿದೆ. ಈ ಯೋಜನೆಯನ್ನು ಕಾರ್ಯಗತಗೊಳಿಸಲು, ಕೋವಿಡ್ ಕಮಾಂಡ್ ಸೆಂಟರ್ ಮಾದರಿಯಲ್ಲಿ ಸಮಗ್ರ ಆಘಾತ ಮತ್ತು ತುರ್ತು ಕೇಂದ್ರವನ್ನು ಸ್ಥಾಪಿಸಲಾಗುವುದು.
ಇದು ವಿಶೇಷವಾಗಿ ತುರ್ತು ಸಂದರ್ಭಗಳಲ್ಲಿ ಆಸ್ಪತ್ರೆಗಳಲ್ಲಿ ಸುಲಭವಾಗಿ ದಾಖಲಾಗಲು ಅನುಕೂಲವಾಗುತ್ತದೆ. ಒಂದೇ ಕರೆಯಲ್ಲಿ ಆಂಬ್ಯುಲೆನ್ಸ್ ಸೇವೆಗಳು ಲಭ್ಯವಿರುತ್ತವೆ. ಪ್ರಸ್ತಾವಿತ 3000 ಕೋಟಿ ರೂ.ಗಳಲ್ಲಿ ಮುಂದಿನ ಐದು ವರ್ಷಗಳಲ್ಲಿ ಮೂಲ ಆರೋಗ್ಯ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲು 1,614 ಕೋಟಿ ರೂ. ಜೊತೆಗೆ, ಪ್ರತಿ ವರ್ಷ ಸರಾಸರಿ 550 ಕೋಟಿ ರೂ.ಗಳನ್ನು ಟ್ರಾಮಾ ಮತ್ತು ನಾನ್ ಟ್ರಾಮಾ ಮೆಡಿಸಿನ್ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಲು ಖರ್ಚು ಮಾಡಲಾಗುವುದು. ಆಂಬ್ಯುಲೆನ್ಸ್ ಸೇವೆಯನ್ನು ಹೆಚ್ಚಿಸಲು ಒಟ್ಟು 300 ಕೋಟಿ ರೂ.ಗಳನ್ನು ವ್ಯಯಿಸಲಾಗುವುದು, ಇದರ ಅಡಿಯಲ್ಲಿ ಸುಧಾರಿತ ಲೈಫ್ ಸಪೋರ್ಟ್ ವ್ಯವಸ್ಥೆ ಹೊಂದಿರುವ 750 ಆಂಬ್ಯುಲೆನ್ಸ್ ಗಳನ್ನು ಖರೀದಿಸಲಾಗುತ್ತದೆ.
ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಲೋಕ್ ಕುಮಾರ್ ಮಾತನಾಡಿ, ಹಂತ-ಹಂತವಾಗಿ ಲೈವ್ ಎಮರ್ಜೆನ್ಸಿ ಮಾನಿಟರಿಂಗ್ ವ್ಯವಸ್ಥೆ ಜಾರಿಗೆ ತರಲು ಯೋಜನೆ ರೂಪಿಸಲಾಗುತ್ತಿದೆ. ಜೀವ ಉಳಿಸಲು ಆರಂಭಿಕ 48 ಗಂಟೆಗಳು ಬಹಳ ಮುಖ್ಯ. ಆದ್ದರಿಂದ ಮುಖ್ಯಮಂತ್ರಿಗಳು ರಕ್ಷಣೆಗೆ ಸಂಕಲ್ಪ ಮಾಡಿದ್ದಾರೆ. ರಾಜ್ಯದಲ್ಲಿ ಅಂತಹ ಪ್ರತಿ ತುರ್ತು ಆರೈಕೆಯ ರೋಗಿಗಳಿಗೆ ಮೊದಲ 48 ಗಂಟೆಗಳ ಕಾಲ ಉಚಿತ ಚಿಕಿತ್ಸೆ ನೀಡಲಾಗುವುದು. ತಕ್ಷಣಕ್ಕೆ ಹಣ ಹೊಂದಿಸಲು ಸಾಧ್ಯವಾಗದವರಿಗೆ ಇದರಿಂದ ಅನುಕೂಲವಾಗಲಿದೆ ಎಂದು ಹೇಳಿದರು.