alex Certify ಕಣಿವೆ ದಾರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಬಸ್: 12 ಜನ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಣಿವೆ ದಾರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಬಸ್: 12 ಜನ ಸಾವು

ಉತ್ತರಾಖಂಡದ ಚಮೋಲಿ ಜಿಲ್ಲೆಯ ಜೋಶಿ ಮಠದ ಬಳಿ ಅಪಘಾತ ಸಂಭವಿಸಿದ್ದು, ಇಬ್ಬರು ಮಹಿಳೆಯರು ಸೇರಿದಂತೆ 12 ಜನರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಉತ್ತರಾಖಂಡದ ಚಮೋಲಿ ಜಿಲ್ಲೆಯ ಉರ್ಗಾಮ್ ಕಣಿವೆಯಲ್ಲಿ ನಿರ್ಮಾಣ ಹಂತದಲ್ಲಿರುವ ಉರ್ಗಾಮ್-ಪಲ್ಲಾ ಜಖೋಲಾ ಮಾರ್ಗದಲ್ಲಿ ಅಪಘಾತ ಸಂಭವಿಸಿದೆ. ಶುಕ್ರವಾರ ಸಂಜೆ ಪಲ್ಲಾ ಗ್ರಾಮದ ಬಳಿ ವಾಹನ ಅಪಘಾತಕ್ಕೀಡಾಗಿ ಆಳವಾದ ಕಂದರಕ್ಕೆ ಬಿದ್ದಿದೆ. ಬಿದ್ದ ರಭಸಕ್ಕೆ ವಾಹನ ತುಂಡಾಗಿ ಬಿಡಿಭಾಗಗಳು ಚೆಲ್ಲಾಪಿಲ್ಲಿಯಾಗಿವೆ. ಮೃತದೇಹಗಳು ಕೂಡ ಚೆಲ್ಲಾಪಿಲ್ಲಿಯಾಗಿವೆ.

ಇದುವರೆಗೆ 12 ಮಂದಿ ಅಪಘಾತ ಸ್ಥಳದಲ್ಲಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಹಿಮಾಂಶು ಖುರಾನಾ ತಿಳಿಸಿದ್ದಾರೆ. ಐವರು ಗಾಯಗೊಂಡಿದ್ದು, ಈ ಪೈಕಿ ಮೂವರನ್ನು ರಸ್ತೆಗೆ ಕರೆತರಲಾಗಿದೆ. ಮಾಹಿತಿ ಪ್ರಕಾರ ವಾಹನದಲ್ಲಿ 17 ಮಂದಿ ಇದ್ದರು.

ಗಾಯಾಳುಗಳನ್ನು ಚಿಕಿತ್ಸೆಗಾಗಿ ಉರ್ಗಾಂ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ಜಿಲ್ಲಾ ಮ್ಯಾಜಿಸ್ಟ್ರೇಟ್ ಹಿಮಾಂಶು ಖುರಾನಾ ಮತ್ತು ಪೊಲೀಸ್ ಅಧೀಕ್ಷಕ ಪ್ರಮೇಂದ್ರ ದೋಬಾಲ್ ಅವರು ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳೊಂದಿಗೆ ಸ್ಥಳಕ್ಕೆ ತಲುಪಿದರು.

ಹಳ್ಳ ಆಳವಿರುವುದರಿಂದ ರಕ್ಷಣಾ ಕಾರ್ಯಾಚರಣೆಗೆ ತೊಂದರೆಯಾಗಿದೆ. ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ. ಸ್ಥಳೀಯರು ಸಹ ಪರಿಹಾರ ಮತ್ತು ರಕ್ಷಣೆಗೆ ಸಹಾಯ ಮಾಡುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...