alex Certify ಬಿಜೆಪಿ ಮುಖಂಡನ ಪುತ್ರನಿಂದ ಘೋರ ಕೃತ್ಯ: ರೆಸಾರ್ಟ್ ನಲ್ಲಿ ರಿಸೆಪ್ಷನಿಸ್ಟ್ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ಮುಖಂಡನ ಪುತ್ರನಿಂದ ಘೋರ ಕೃತ್ಯ: ರೆಸಾರ್ಟ್ ನಲ್ಲಿ ರಿಸೆಪ್ಷನಿಸ್ಟ್ ಹತ್ಯೆ

ಉತ್ತರಾಖಂಡ ರೆಸಾರ್ಟ್‌ನಲ್ಲಿ ಸ್ವಾಗತಕಾರಿಣಿಯನ್ನು ಹತ್ಯೆಗೈದ ಆರೋಪದ ಮೇಲೆ ಬಿಜೆಪಿ ಮುಖಂಡನ ಪುತ್ರನನ್ನು ಬಂಧಿಸಲಾಗಿದೆ

ಪೌರಿ ಜಿಲ್ಲೆಯ ಯಮಕೇಶ್ವರ ಬ್ಲಾಕ್‌ ನಲ್ಲಿರುವ ರೆಸಾರ್ಟ್‌ ನಲ್ಲಿ ಸ್ವಾಗತಕಾರಿಣಿಯಾಗಿ ಕೆಲಸ ಮಾಡುತ್ತಿದ್ದ 19 ವರ್ಷದ ಯುವತಿಯನ್ನು ಕೊಂದ ಆರೋಪದ ಮೇಲೆ ಹರಿದ್ವಾರದ ಬಿಜೆಪಿ ನಾಯಕ ವಿನೋದ್ ಆರ್ಯ ಅವರ ಪುತ್ರ ಪುಲ್ಕಿತ್ ಆರ್ಯನ್ನು ಬಂಧಿಸಲಾಗಿದೆ. ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಯುವತಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ರೆಸಾರ್ಟ್‌ ನಲ್ಲಿರುವ ಇಬ್ಬರು ಉದ್ಯೋಗಿಗಳನ್ನು ಕೂಡ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿನೋದ್ ಆರ್ಯ ಉತ್ತರಾಖಂಡದ ಮತಿ ಕಲಾ ಮಂಡಳಿಯ ಮಾಜಿ ಅಧ್ಯಕ್ಷರೂ ಆಗಿದ್ದಾರೆ. ರೆಸಾರ್ಟ್ ಮಾಲೀಕ ಪುಲ್ಕಿತ್ ಆರ್ಯ, ಮ್ಯಾನೇಜರ್ ಸೌರಭ್ ಭಾಸ್ಕರ್ ಮತ್ತು ಸಹಾಯಕ ಮ್ಯಾನೇಜರ್ ಅಂಕಿತ್ ಗುಪ್ತಾ ಅವರು ಯುವತಿಯನ್ನು ಕೊಂದು ಆಕೆಯ ಮೃತದೇಹವನ್ನು ಚೀಲಾ ಕಾಲುವೆಗೆ ಎಸೆದಿರುವುದಾಗಿ ಒಪ್ಪಿಕೊಂಡ ನಂತರ ಬಂಧಿಸಲಾಗಿದೆ. ಶವಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೌರಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶೇಖರ್ ಚಂದ್ರ ಸುಯಲ್ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...