alex Certify ನಾಲ್ಕನೇ ಬಾರಿ ಅಪಘಾತಕ್ಕೊಳಗಾದ ವಂದೇ ಭಾರತ್​ ಎಕ್ಸ್​ಪ್ರೆಸ್​ ರೈಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಲ್ಕನೇ ಬಾರಿ ಅಪಘಾತಕ್ಕೊಳಗಾದ ವಂದೇ ಭಾರತ್​ ಎಕ್ಸ್​ಪ್ರೆಸ್​ ರೈಲು

ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಗುಜರಾತ್‌ನ ವಲ್ಸಾದ್‌ನ ಅತುಲ್ ನಿಲ್ದಾಣದ ಬಳಿ ಹಸುವಿಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಇದರಿಂದಾಗಿ ರೈಲಿನ ಮುಂಭಾಗ ಹಾನಿಗೊಳಗಾಗಿದ್ದು, ಇದರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮುಂಬೈ-ಗಾಂಧಿನಗರ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೆಪ್ಟೆಂಬರ್ 30 ರಂದು ಉದ್ಘಾಟನೆಗೊಂಡ ನಂತರ ಇದು ನಾಲ್ಕನೇ ಬಾರಿಗೆ ಜಾನುವಾರು ಅಪಘಾತಕ್ಕೆ ಒಳಗಾಗಿದೆ. ಈ ರೈಲು ಮಹಾರಾಷ್ಟ್ರದ ಮುಂಬೈನಿಂದ ಗುಜರಾತ್‌ನ ಗಾಂಧಿನಗರಕ್ಕೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಅದೃಷ್ಟವಶಾತ್​ ಯಾವುದೇ ಪ್ರಯಾಣಿಕರು ಗಾಯಗೊಂಡಿಲ್ಲ. ಅಪಘಾತದಿಂದ ಯಾವುದೇ ಕಾರ್ಯಾಚರಣೆಗೆ ಹಾನಿಯಾಗಿಲ್ಲ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ.

ಚೆನ್ನೈನ ಕೋಚ್ ಫ್ಯಾಕ್ಟರಿಯಲ್ಲಿ ಈ ರೈಲುಗಳು ತಯಾರಾಗುತ್ತಿವೆ. ಈ ರೈಲು ಗರಿಷ್ಠ 160 ಕಿ. ಮೀ. ವೇಗದಲ್ಲಿ ಸಂಚರಿಸುತ್ತವೆ. ಶತಾಬ್ದಿಯಷ್ಟೇ ವೇಗವಾಗಿ ಸಂಚರಿಸುತ್ತವಾದರೂ ಪ್ರಯಾಣದ ಅನುಭವ ಚೆನ್ನಾಗಿರುತ್ತದೆ. ಇತರ ರೈಲುಗಳಿಗೆ ಹೋಲಿಸಿದರೆ ಪ್ರಯಾಣದ ಅವಧಿ ಶೇ. 45ರಷ್ಟು ಕಡಿತ ಆಗುತ್ತದೆ. ಪ್ರತಿಯೊಂದು ವಂದೇ ಭಾರತ್ ರೈಲಿನಲ್ಲಿ 1,128 ಪ್ರಯಾಣಿಕರು ಪ್ರಯಾಣ ಮಾಡಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...