alex Certify ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದ ಕ್ಯಾ. ವರುಣ್ ಸಿಂಗ್ ಗಂಭೀರ, 50 ಗಂಟೆಯಿಂದ ಜೀವನ್ಮರಣದ ಮಧ್ಯೆ ಹೋರಾಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದ ಕ್ಯಾ. ವರುಣ್ ಸಿಂಗ್ ಗಂಭೀರ, 50 ಗಂಟೆಯಿಂದ ಜೀವನ್ಮರಣದ ಮಧ್ಯೆ ಹೋರಾಟ

ಬೆಂಗಳೂರಿನ ಕಮಾಂಡೋ ಆಸ್ಪತ್ರೆಯಲ್ಲಿರುವ ಕ್ಯಾಪ್ಟನ್ ವರುಣ್ ಸಿಂಗ್ ಅವರ ಸ್ಥಿತಿ ಚಿಂತಾಜನಕವಾಗಿದೆ. 50 ಗಂಟೆಯಿಂದ ವರುಣ್ ಸಿಂಗ್ ಜೀವನ್ಮರಣದ ಮಧ್ಯೆ ಹೋರಾಟ ನಡೆಸಿದ್ದಾರೆ.

ತಮಿಳುನಾಡಿನ ಕೂನೂರಿನಲ್ಲಿ ನಡೆದ ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ ವರುಣ್ ಸಿಂಗ್ ಅವರಿಗೆ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ. ಅವರನ್ನು ಬದುಕಿಸಲು ವೈದ್ಯರು ಹರಸಾಹಸ ನಡೆಸಿದ್ದಾರೆ. ಅವರ ಚೇತರಿಕೆಗೆ ದೇಶಾದ್ಯಂತ ಪ್ರಾರ್ಥನೆ ಮಾಡಲಾಗಿದೆ.

ಜೀವರಕ್ಷಕ ಸಾಧನಗಳನ್ನು ಅಳವಡಿಸಿರುವ ವರುಣ್ ಸಿಂಗ್ ಅವರಿಗೆ ಶೇ. 40 ರಷ್ಟು ಸುಟ್ಟ ಗಾಯಗಳಾಗಿದ್ದು, ಅವರನ್ನ ರಕ್ಷಿಸಲು ವೈದ್ಯರ ತಂಡ ನಿರಂತರ ನಿಗಾ ವಹಿಸಿ ಚಿಕಿತ್ಸೆ ಮುಂದುವರೆಸಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...