alex Certify ವೇದಿಕೆಯಲ್ಲಿ ಹಾಡುತ್ತಲೇ ಇಹಲೋಕ ತ್ಯಜಿಸಿದ ಹಿನ್ನೆಲೆ ಗಾಯಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೇದಿಕೆಯಲ್ಲಿ ಹಾಡುತ್ತಲೇ ಇಹಲೋಕ ತ್ಯಜಿಸಿದ ಹಿನ್ನೆಲೆ ಗಾಯಕ

ಖ್ಯಾತ ಹಿನ್ನೆಲೆ ಗಾಯಕ ಎದವ ಬಶೀರ್ ಅವರು ವೇದಿಕೆ ಮೇಲೆ ಹಾಡುತ್ತಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.‌

ಕೇರಳದ ಅಲಪೂಝಾದಲ್ಲಿನ ಬ್ಲ್ಯೂ ಡೈಮಂಡ್ಸ್ ಆರ್ಕೆಸ್ಟ್ರಾದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಶನಿವಾರ ರಾತ್ರಿ ಹಾಡುತ್ತಿದ್ದರು. ಹಾಡುತ್ತಿದ್ದ ಸಂದರ್ಭದಲ್ಲಿ ಇದ್ದಕ್ಕಿದ್ದಂತೆಯೇ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಬದುಕುಳಿಯಲಿಲ್ಲ.

ಈ ಶಾಕಿಂಗ್ ಸುದ್ದಿ ಕೇಳಿದ ಅವರ ಅಭಿಮಾನಿಗಳು ತೀವ್ರ ದುಃಖಿತರಾಗಿದ್ದು, ಸಂತಾಪ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮ ನೆಚ್ಚಿನ ಗಾಯಕನ ಅಕಾಲಿಕ ಸಾವಿನಿಂದ ದುಃಖತಪ್ತರಾಗಿದ್ದೇವೆ ಎಂದು ಅಭಿಮಾನಿಗಳು ಹೇಳಿಕೊಂಡಿದ್ದಾರೆ.

ಈ ಆಘಾತಕಾರಿ ಸುದ್ದಿಯನ್ನು ನಂಬಲು ಸಾಧ್ಯವಾಗುತ್ತಿಲ್ಲ ಎಂದು ಕೆಲವು ಅಭಿಮಾನಿಗಳು ದಿಗ್ಭ್ರಮೆ ವ್ಯಕ್ತಪಡಿಸಿದ್ದರೆ, ಇನ್ನೂ ಕೆಲವರು ಅವರ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...