ಪವಿತ್ರಾ ಗೌಡ ದರ್ಶನ್ ಪತ್ನಿ ಅಲ್ಲ: ವಿಜಯಲಕ್ಷ್ಮಿ ಪತ್ರ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಪವಿತ್ರಾಗೌಡ ಅವರು ದರ್ಶನ್ ಪತ್ನಿ ಎಂದು ಉಲ್ಲೇಖಿಸದಂತೆ ನಗರ ಪೊಲೀಸ್ ಆಯುಕ್ತರಿಗೆ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಪತ್ರ ಬರೆದಿದ್ದಾರೆ.

2003ರಲ್ಲಿ ನಾನು ಮತ್ತು ದರ್ಶನ್ ಮದುವೆಯಾಗಿದ್ದು, ನಮಗೆ ಒಬ್ಬ ಪುತ್ರನಿದ್ದಾನೆ. ಆದರೆ, ಸಂಜಯ್ ಸಿಂಗ್ ಎಂಬುವರ ಜೊತೆ ಪವಿತ್ರಾ ಗೌಡಗೆ ಮದುವೆಯಾಗಿದ್ದು, ಅವರಿಗೂ ಒಬ್ಬ ಪುತ್ರಿ ಇದ್ದಾಳೆ. ನೀವು ಪತ್ರಿಕಾಗೋಷ್ಠಿಯಲ್ಲಿ ದರ್ಶನ್ ಅವರ ಪತ್ನಿ ಪವಿತ್ರಾ ಗೌಡ ಎಂದು ಹೇಳಿದ್ದೀರಿ. ಗೃಹ ಸಚಿವರು ಕೂಡ ಅದೇ ರೀತಿ ಹೇಳಿದ್ದಾರೆ. ಹೀಗಾಗಿ ಪೊಲೀಸ್ ದಾಖಲೆಗಳಲ್ಲಿ ಪವಿತ್ರಾ ಗೌಡರನ್ನು ದರ್ಶನ್ ಅವರ ಪತ್ನಿ ಎಂದು ಉಲ್ಲೇಖಿಸದಂತೆ ವಿಜಯಲಕ್ಷ್ಮಿ ಮನವಿ ಮಾಡಿ ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read