alex Certify ಲಾಕ್ ಡೌನ್: ನಿಷೇಧದ ನಡುವೆಯೂ ನಡೆದ ರಥೋತ್ಸವದಲ್ಲಿ ಅವಘಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಾಕ್ ಡೌನ್: ನಿಷೇಧದ ನಡುವೆಯೂ ನಡೆದ ರಥೋತ್ಸವದಲ್ಲಿ ಅವಘಡ

ವಿಜಯಪುರ: ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಗ್ರಾಮವೊಂದರಲ್ಲಿ ಲಾಕ್ ಡೌನ್ ನಡುವೆಯೂ ಜಾತ್ರೆ ನಡೆಸಲಾಗಿದೆ. ರಾಜ್ಯದಲ್ಲಿ ಜಾತ್ರೆ-ಉತ್ಸವ ನಡೆಸದಂತೆ ನಿಷೇಧ ಹೇರಿದ್ದರೂ ಬಸರಕೋಡದಲ್ಲಿ ಪವಾಡ ಬಸವೇಶ್ವರ ಜಾತ್ರೆಯ ರಥೋತ್ಸವ ನಡೆಸಲಾಗಿದೆ.

ಈ ಸಂದರ್ಭದಲ್ಲಿ ರಥದ ಚಕ್ರಕ್ಕೆ ಸಿಲುಕಿ 45 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ದೇವಾಲಯ ಸಮಿತಿಯಿಂದ ಜಾತ್ರೆಯನ್ನು ರದ್ದುಮಾಡಿ ಸಾರ್ವಜನಿಕರು ಬರದಂತೆ ತಿಳಿಸಿದ್ದಾರೆ. ಬುಧವಾರ ಮಧ್ಯಾಹ್ನ ಪೋಲೀಸರ ಕಣ್ಣು ತಪ್ಪಿಸಿ ರಥೋತ್ಸವ ನಡೆಸಲಾಗಿದೆ. ಈ ವೇಳೆಯಲ್ಲಿ ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೋವಿಡ್ ನಿಯಮ ಉಲ್ಲಂಘಿಸಿ ರಥೋತ್ಸವ ನಡೆಸಿದ ಮತ್ತು ವ್ಯಕ್ತಿ ಮೃತಪಟ್ಟ ಬಗ್ಗೆ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...