alex Certify ರಥದ ಕಲಶ ಕಟ್ಟುವಾಗಲೇ ದುರಂತ: ಜಾರಿ ಬಿದ್ದು ವ್ಯಕ್ತಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಥದ ಕಲಶ ಕಟ್ಟುವಾಗಲೇ ದುರಂತ: ಜಾರಿ ಬಿದ್ದು ವ್ಯಕ್ತಿ ಸಾವು

ವಿಜಯಪುರ: ರಥದ ಕಲಶ ಕಟ್ಟುತ್ತಿದ್ದಾಗ ಜಾರಿ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ಗೋಲಗೇರಿ ಗ್ರಾಮದ ಗೊಲ್ಲಾಳೇಶ್ವರ ರಥೋತ್ಸವದಲ್ಲಿ ನಡೆದಿದೆ.

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ಘಟನೆ ನಡೆದಿದೆ. ಸಾಹೇಬಪಟೇಲ್ ಖಾಜಾ ಪಟೇಲ್ ಕಾಚಾಪುರ(55) ಮೃತಪಟ್ಟವರು ಎಂದು ಹೇಳಲಾಗಿದೆ. 18ನೇ ವಯಸ್ಸಿನಿಂದಲೂ ಸಾಹೇಬ ಪಟೇಲ್ ರಥದ ಕಲಶ ಕಟ್ಟುತ್ತಿದ್ದರು. ಕಳಶ ಕಟ್ಟುವಾಗ ಕೈಯಲ್ಲಿದ್ದ ಹಗ್ಗ ಜಾರಿದ್ದರಿಂದ ದುರಂತ ನಡೆದಿದೆ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾಹೇಬ ಪಟೇಲ್ ಸಾವನ್ನಪ್ಪಿದ್ದಾರೆ. ಘಟನೆ ಹಿನ್ನೆಲೆ ರಥೋತ್ಸವವನ್ನು ಗ್ರಾಮಸ್ಥರು ರದ್ದುಗೊಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...