alex Certify BIG NEWS: ವಿಜಯೇಂದ್ರ ಸ್ಪರ್ಧೆ ಬಗ್ಗೆ ಯಡಿಯೂರಪ್ಪ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿಜಯೇಂದ್ರ ಸ್ಪರ್ಧೆ ಬಗ್ಗೆ ಯಡಿಯೂರಪ್ಪ ಮಹತ್ವದ ಮಾಹಿತಿ

ಶಿವಮೊಗ್ಗ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ರಾಜ್ಯಾದ್ಯಂತ ಪ್ರವಾಸ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಶಿಕಾರಿಪುರ ತಾಲೂಕಿನ ಬಿಜೆಪಿ ಕಾರ್ಯಕರ್ತರು ಬುಧವಾರ ಬೆಂಗಳೂರಿಗೆ ತೆರಳಿ ಯಡಿಯೂರಪ್ಪ ಅವರಿಗೆ ಶಿಕಾರಿಪುರದಿಂದ ಮತ್ತೊಮ್ಮೆ ಚುನಾವಣೆಗೆ ಸ್ಪರ್ಧಿಸಬೇಕು ಎಂದು ಮನವಿ ಮಾಡಿದ ಸಂದರ್ಭದಲ್ಲಿ ಬಿಎಸ್ವೈ ಕಾರ್ಯಕರ್ತರೊಂದಿಗೆ ಮಾತನಾಡಿ, ನನಗೆ ಚುನಾವಣೆಗೆ ಸ್ಪರ್ಧಿಸುವ ಮನಸ್ಸಿಲ್ಲ. ಪ್ರವಾಸ ಕೈಗೊಂಡು ಪಕ್ಷವನ್ನು ಅಧಿಕಾರಕ್ಕೆ ತರಲು ಹೆಚ್ಚಿನ ಗಮನ ಹರಿಸುತ್ತೇನೆ ಎಂದು ಹೇಳಿದ್ದಾರೆ.

ನೀವು ಸ್ಪರ್ಧಿಸದಿದ್ದರೆ ವಿಜಯೇಂದ್ರ ಅವರ ಸ್ಪರ್ಧೆಗೆ ಅವಕಾಶ ನೀಡಬೇಕೆಂದು ಶಿಕಾರಿಪುರ ತಾಲೂಕಿನ ಬಿಜೆಪಿ ಕಾರ್ಯಕರ್ತರು ಮನವಿ ಮಾಡಿದ್ದು, ಇದರ ಬಗ್ಗೆ ವರಿಷ್ಠರೊಂದಿಗೆ ಮಾತನಾಡಿ ಒಪ್ಪಿಗೆ ಕೊಡಿಸುತ್ತೇನೆ. ವಿಜಯೇಂದ್ರ ಸ್ಪರ್ಧಿಸಲು ಸೂಚಿಸುತ್ತೇನೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಬಿ. ಚನ್ನವೀರಪ್ಪ ಸೇರಿದಂತೆ 350 ಕ್ಕೂ ಅಧಿಕ ಮುಖಂಡರು, ಕಾರ್ಯಕರ್ತರು ಬೆಂಗಳೂರಿನಲ್ಲಿ ಬಿ.ಎಸ್.ವೈ. ಭೇಟಿಯಾಗಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...