alex Certify ಜೆಡಿಎಸ್ ಬಲಿಷ್ಠ: ಸಂಚಲನ ಮೂಡಿಸಿದ ಅನಂತಕುಮಾರ್ ಪುತ್ರಿ ಟ್ವೀಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜೆಡಿಎಸ್ ಬಲಿಷ್ಠ: ಸಂಚಲನ ಮೂಡಿಸಿದ ಅನಂತಕುಮಾರ್ ಪುತ್ರಿ ಟ್ವೀಟ್

ಬೆಂಗಳೂರು: ಜೆಡಿಎಸ್ ಪಕ್ಷ ಬಲಿಷ್ಠವಾಗಿದೆ ಎಂದು ಕೇಂದ್ರದ ಮಾಜಿ ಸಚಿವ, ಬಿಜೆಪಿ ಹಿರಿಯ ನಾಯಕರಾಗಿದ್ದ ಅನಂತಕುಮಾರ್ ಪುತ್ರಿ ವಿಜೇತಾ ಟ್ವೀಟ್ ಮಾಡಿದ್ದಾರೆ. ವಿಜೇತಾ ಅನಂತಕುಮಾರ್ ಅವರ ಟ್ವೀಟ್ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ಸಂಚಲನ ಮೂಡಿಸಿದೆ.

ಕರ್ನಾಟಕ ರಾಜಕೀಯ ನಿಜವಾಗಿಯೂ ಏಕೆ ಆಸಕ್ತಿದಾಯಕವಾಗಿದೆ? ಜೆಡಿಎಸ್ ರಾಜ್ಯದಲ್ಲಿ ತುಂಬಾ ಬಲಿಷ್ಠವಾಗಿದೆ ಎಂದು ವಿಜೇತಾ ಅನಂತಕುಮಾರ್ ಟ್ವೀಟ್ ಮಾಡಿದ್ದಾರೆ.

ಅನಂತಕುಮಾರ್ ನಿಧನದ ನಂತರ ತೇಜಸ್ವಿನಿ ಅನಂತಕುಮಾರ್ ಅವರಿಗೆ ಟಿಕೆಟ್ ನೀಡಿರಲಿಲ್ಲ. ಬಿಜೆಪಿಯಲ್ಲಿ ಸೂಕ್ತ ಸ್ಥಾನ ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ವಿಜೇತಾ ಅನಂತಕುಮಾರ್ ಟ್ವೀಟ್ ಮಾಡಿದ್ದಾರೆಂದು ಚರ್ಚೆಯಾಗುತ್ತಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ವಿಜೇತಾ ಅವರು ನನ್ನ ಸಹೋದರಿ ಸಮಾನರಾಗಿದ್ದು, ಅವರಿಗೆ ಧನ್ಯವಾದಗಳು. ಅವರ ಮಾತು ನಮ್ಮ ಕಾರ್ಯಕರ್ತರಲ್ಲಿ ಉತ್ಸಾಹ ತಂದಿದೆ. ತೇಜಸ್ವಿನಿ ಅನಂತಕುಮಾರ್ ಮತ್ತು ವಿಜೇತಾ ಅನಂತಕುಮಾರ್ ಅವರು ಪಕ್ಷಕ್ಕೆ ಬಂದರೆ ಸ್ವಾಗತಿಸುತ್ತೇವೆ. ಗೌರವದೊಂದಿಗೆ ಸ್ಥಾನಮಾನ ನೀಡುತ್ತೇವೆ ಎಂದು ಹೇಳಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...