alex Certify ಕ್ಷೇತ್ರ ಪ್ರವೇಶಕ್ಕೆ ಷರತ್ತು ಸಡಿಲಿಕೆ ಕೋರಿದ್ದ ಶಾಸಕ ವಿನಯ ಕುಲಕರ್ಣಿಗೆ ಮತ್ತೆ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ಷೇತ್ರ ಪ್ರವೇಶಕ್ಕೆ ಷರತ್ತು ಸಡಿಲಿಕೆ ಕೋರಿದ್ದ ಶಾಸಕ ವಿನಯ ಕುಲಕರ್ಣಿಗೆ ಮತ್ತೆ ಶಾಕ್

ಬೆಂಗಳೂರು: ಧಾರವಾಡ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ವಿನಯ ಕುಲಕರ್ಣಿ ಧಾರವಾಡ ಪ್ರವೇಶಕ್ಕೆ ಕೋರ್ಟ್ ನಿರಾಕರಿಸಿದೆ.

ಷರತ್ತು ಸಡಿಲಿಕೆ ಕೋರಿದ ಶಾಸಕರ ಅರ್ಜಿಯನ್ನು ವಜಾಗೊಳಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ. ಸಿಬಿಐ ಪರವಾಗಿ ಎಸ್‌ಪಿಪಿ ಗಂಗಾಧರ ಶೆಟ್ಟಿ ಷರತ್ತು ಸಡಿಲಿಕೆ ಮಾಡದಂತೆ ವಾದಿಸಿದ್ದರು.

ಶಾಸಕನಾಗಿರುವ ಕಾರಣಕ್ಕೆ ಕ್ಷೇತ್ರಕ್ಕೆ ಭೇಟಿ ನೀಡಲು ವಿನಯ ಕುಲಕರ್ಣಿ ಅವಕಾಶ ಕೋರಿದ್ದರು. ಸ್ಪರ್ಧೆಗೆ ಟಿಕೆಟ್ ಪಡೆಯುವ ಮೊದಲು ಕೋರ್ಟ್ ಅನುಮತಿ ಪಡೆದಿಲ್ಲ. ಟಿಕೆಟ್ ಪಡೆದ ನಂತರ ಕ್ಷೇತ್ರದ ಭೇಟಿಗೆ ಅನುಮತಿ ನಿರಾಕರಿಸಲಾಗಿದೆ. ಪ್ರಮುಖ ಸಾಕ್ಷಿಗಳ ವಿಚಾರಣೆ ಇನ್ನೂ ಆರಂಭವಾಗಿಲ್ಲ. ಹೀಗಾಗಿ ಧಾರವಾಡ ಭೇಟಿಗೆ ಅನುಮತಿ ನಿರಾಕರಿಸಿ ಆದೇಶ ಹೊರಡಿಸಲಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಜಡ್ಜ್ ಬಿ. ಜಯಂತ್ ಕುಮಾರ್ ಆದೇಶಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...