alex Certify BIG BREAKING: ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಸಿಬಿಐ ಶಾಕ್, ಕೆಎಎಸ್ ಅಧಿಕಾರಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಸಿಬಿಐ ಶಾಕ್, ಕೆಎಎಸ್ ಅಧಿಕಾರಿ ಅರೆಸ್ಟ್

ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತಿ ಸದಸ್ಯರಾಗಿದ್ದ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಆಪ್ತ ಕಾರ್ಯದರ್ಶಿಯಾಗಿದ್ದ ಕೆಎಎಸ್ ಅಧಿಕಾರಿಯನ್ನು ಬಂಧಿಸಲಾಗಿದೆ.

ಸೋಮು ನ್ಯಾಮಗೌಡ ಬಂಧಿತ ಕೆಎಎಸ್ ಅಧಿಕಾರಿಯಾಗಿದ್ದಾರೆ. ಪ್ರಸ್ತುತ ಗದಗ ಎಪಿಎಂಸಿ ಕಾರ್ಯದರ್ಶಿಯಾಗಿ ಅವರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಗದಗದಲ್ಲಿ ಕೆಎಎಸ್ ಅಧಿಕಾರಿ ಸೋಮು ಅವರನ್ನು ಬಂಧಿಸಲಾಗಿದೆ. ವಿನಯ ಕುಲಕರ್ಣಿ ಸಚಿವರಾಗಿದ್ದಾಗ ಸಂದರ್ಭದಲ್ಲಿ ಆಪ್ತ ಕಾರ್ಯದರ್ಶಿಯಾಗಿದ್ದರು.

ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ ಕುಲಕರ್ಣಿ ಜೈಲು ಸೇರಿದ್ದಾರೆ. ಸೋಮು ಅವರಿಗೆ ಅವರಿಗೆ ಹತ್ಯೆಯ ಬಗ್ಗೆ ಎಲ್ಲಾ ಮಾಹಿತಿ ಇತ್ತು. ಸೂಕ್ತ ಸಾಕ್ಷ್ಯಾಧಾರ ಸಂಗ್ರಹಿಸಿದ ನಂತರ ಸಿಬಿಐನಿಂದ ಅವರನ್ನು ಬಂಧಿಸಲಾಗಿದೆ ಎನ್ನಲಾಗಿದೆ.

ಹತ್ಯೆಗೂಗು ಮೊದಲು ವಿನಯ್ ಕುಲಕರ್ಣಿ ದೆಹಲಿ ಪ್ರವಾಸಕ್ಕೆ ಹೋಗಿರುವತೆ ನಕಲಿ ಪ್ರವಾಸದ ವೇಳಾಪಟ್ಟಿಯನ್ನು ತಯಾರಿಸಲಾಗಿತ್ತು. ದೆಹಲಿಗೆ ವಿಮಾನದ ಟಿಕೆಟ್ ಬುಕ್ ಮಾಡಿ ಹತ್ಯೆ ಪ್ರಕರಣದ ಬಗ್ಗೆ ಸಂಶಯ ಬರದಂತೆ ಪ್ಲಾನ್ ಮಾಡಿಕೊಂಡಿದ್ದರು. ವಿನಯ ಕುಲಕರ್ಣಿ ದೆಹಲಿ ಪ್ರವಾಸಕ್ಕೆ ತೆರಳಿರುವಂತೆ ನಾಟಕವಾಡಿಸಿದ್ದರು.

ದೆಹಲಿಯ ಬದಲು ವಿನಯ ಕುಲಕರ್ಣಿ ಬೆಂಗಳೂರಿಗೆ ತೆರಳಿ ಬೆಂಗಳೂರಿನ ಮೌರ್ಯ ಹೋಟೆಲ್ ನಲ್ಲಿ ತಂಗಿದ್ದರು. ಯೋಗೀಶ್ ಗೌಡ ಹತ್ಯೆ ನಡೆದ ನಂತರ ಆರೋಪಿಗಳನ್ನು ಸೋಮು ನ್ಯಾಮಗೌಡ ಮತ್ತು ವಿನಯ ಕುಲಕರ್ಣಿ ಭೇಟಿಯಾಗಿದ್ದರು. ಈ ಬಗ್ಗೆ ಸೂಕ್ತ ಸಾಕ್ಷ್ಯಾಧಾರ ಸಂಗ್ರಹಿಸಿದ ನಂತರ ಸಿಬಿಐ ಸೋಮು ಅವರನ್ನು ಬಂಧಿಸಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...