alex Certify ‘ದಿ ಕಾಶ್ಮೀರ್ ಫೈಲ್ಸ್’ ಬಿಡುಗಡೆ ಬಳಿಕ ಕುಟುಂಬವನ್ನೂ ಸಹ ಭೇಟಿಯಾಗಲು ಸಾಧ್ಯವಾಗುತ್ತಿಲ್ಲ; ಅಳಲು ತೋಡಿಕೊಂಡ ನಿರ್ದೇಶಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ದಿ ಕಾಶ್ಮೀರ್ ಫೈಲ್ಸ್’ ಬಿಡುಗಡೆ ಬಳಿಕ ಕುಟುಂಬವನ್ನೂ ಸಹ ಭೇಟಿಯಾಗಲು ಸಾಧ್ಯವಾಗುತ್ತಿಲ್ಲ; ಅಳಲು ತೋಡಿಕೊಂಡ ನಿರ್ದೇಶಕ

ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ 2022 ರ ಮಾರ್ಚ್ 11 ರಂದು ವಿಶ್ವದಾದ್ಯಂತ ಬಿಡುಗಡೆಯಾಗಿದ್ದು, ಭರ್ಜರಿ ಯಶಸ್ಸು ಗಳಿಸಿತ್ತು. ಬಾಕ್ಸ್ ಆಫೀಸ್ ಕಲೆಕ್ಷನ್ ನಲ್ಲಿ 340 ಕೋಟಿ ರೂಪಾಯಿಗಳನ್ನು ಈ ಚಿತ್ರ ಗಳಿಕೆ ಮಾಡಿದ್ದು, ಯಶಸ್ವಿ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು.

ಅನುಪಮ್ ಖೇರ್, ಮಿಥುನ್ ಚಕ್ರವರ್ತಿ, ದರ್ಶನ್ ಕುಮಾರ್, ಪಲ್ಲವಿ ಜೋಶಿ, ಚಿನ್ಮಯ್ ಮಂಡ್ಲೇಕರ್ ಮೊದಲಾದವರು ಈ ಚಿತ್ರದ ಪ್ರಮುಖ ಭೂಮಿಕೆಯಲ್ಲಿದ್ದು, ಕಾಶ್ಮೀರದಲ್ಲಿ ನಡೆದಿದ್ದ ಪಂಡಿತರ ಹತ್ಯಾಕಾಂಡವನ್ನು ಈ ಚಿತ್ರ ಬಿಂಬಿಸಿತ್ತು. ಈ ಚಿತ್ರಕ್ಕೆ ಬಹುತೇಕ ರಾಜ್ಯ ಸರ್ಕಾರಗಳು ತೆರಿಗೆ ವಿನಾಯಿತಿಯನ್ನು ಘೋಷಿಸಿದ್ದವು.

ಚಿತ್ರ ಬಿಡುಗಡೆಯಾದ ಬಳಿಕ ನಿರ್ದೇಶಕ ವಿವೇಕ್ ಅಗ್ನಿಹೋತ್ರಿಯವರಿಗೆ ಬೆದರಿಕೆ ಕರೆಗಳು ಬಂದಿದ್ದು, ಈ ಹಿನ್ನೆಲೆಯಲ್ಲಿ ಅವರಿಗೆ ಬಿಗಿ ಭದ್ರತೆ ಒದಗಿಸಲಾಗಿದೆ. ಇದೀಗ ಈ ಕುರಿತು ಮಾತನಾಡಿರುವ ಅವರು ಬೆದರಿಕೆ ಇರುವ ಕಾರಣಕ್ಕೆ ನನಗೆ ಹೊರಗೆ ಹೋಗಲು ಸಾಧ್ಯವಾಗುತ್ತಿಲ್ಲ. ಕುಟುಂಬ ಸದಸ್ಯರನ್ನೂ ಭೇಟಿಯಾಗಲು ಆಗುತ್ತಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...