alex Certify WAR BREAKING: 249 ಭಾರತೀಯರನ್ನು ಹೊತ್ತು ದೆಹಲಿಗೆ ಆಗಮಿಸಿದ 5ನೇ ವಿಮಾನ; ತಾಯ್ನಾಡಿಗೆ ಮರಳಿದ ಕರ್ನಾಟಕದ 42 ವಿದ್ಯಾರ್ಥಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

WAR BREAKING: 249 ಭಾರತೀಯರನ್ನು ಹೊತ್ತು ದೆಹಲಿಗೆ ಆಗಮಿಸಿದ 5ನೇ ವಿಮಾನ; ತಾಯ್ನಾಡಿಗೆ ಮರಳಿದ ಕರ್ನಾಟಕದ 42 ವಿದ್ಯಾರ್ಥಿಗಳು

ನವದೆಹಲಿ: ಯುದ್ಧ ಪೀಡಿತ ಉಕ್ರೇನ್ ನಲ್ಲಿ ರಷ್ಯಾ ದಾಳಿ ಮುಂದುವರೆದಿದೆ. ಉಕ್ರೇನ್ ನಲ್ಲಿ ಸಿಲುಕಿದ್ದ ಭಾರತೀಯರನ್ನು ಆಪರೇಷನ್ ಗಂಗಾ ಕಾರ್ಯಾಚರಣೆ ಮೂಲಕ ವಿಶೇಷ ವಿಮಾನಗಳಲ್ಲಿ ಏರ್ ಲಿಫ್ಟ್ ಮಾಡಲಾಗುತ್ತಿದ್ದು, ಇದೀಗ 5ನೇ ವಿಮಾನ ಭಾರತಕ್ಕೆ ಆಗಮಿಸಿದೆ.

ಉಕ್ರೇನ್ ನಿಂದ 249 ಭಾರತೀಯರನ್ನು ಹೊತ್ತ 5ನೇ ವಿಮಾನ ದೆಹಲಿಗೆ ಬಂದಿಳಿದಿದ್ದು, ಇದರಲ್ಲಿ 11 ಕರ್ನಾಟಕದ ವಿದ್ಯಾರ್ಥಿಗಳು ಕೂಡ ಆಗಮಿಸಿದ್ದಾರೆ ಎಂದು ತಿಳಿದುಬಂದಿದೆ. ಕನ್ನಡಿಗರಿಗೆ ಕರ್ನಾಟಕ ಭವನದಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ.

ಈ ಮೂಲಕ ಉಕ್ರೇನ್ ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಕರ್ನಾಟಕದ 42 ವಿದ್ಯಾರ್ಥಿಗಳನ್ನು ರಕ್ಷಿಸಿ ರಾಜ್ಯಕ್ಕೆ ಕರೆತರಲಾಗಿದೆ. ಉಕ್ರೇನ್ ರಾಜಧಾನಿ ಕೀವ್ ನಗರದಲ್ಲಿ ರಾಜ್ಯದ ಹಲವು ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದು, ಬಂಕರ್ ನಲ್ಲಿ ಕಾಲ ಕಳೆಯುತ್ತಿದ್ದು ಊಟ, ಆಹಾರ, ನೀರು ಕೂಡ ಸಿಗದೇ ತೊಂದರೆ ಅನುಭವಿಸಿದ್ದೇವೆ ನಮ್ಮನ್ನು ತಕ್ಷಣ ರಕ್ಷಣೆ ಮಾಡಿ ಎಂದು ಕೇಂದ್ರ ಸರ್ಕಾರಕ್ಕೆ ವಿದ್ಯಾರ್ಥಿಗಳು ಮೊರೆಯಿಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...