alex Certify ವರ್ಗಾವಣೆ ಮಾಡಿಸಿಕೊಡುವುದಾಗಿ ಹಾಸ್ಟೆಲ್ ವಾರ್ಡನ್ ಮೇಲೆ ಲೈಂಗಿಕ ದೌರ್ಜನ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವರ್ಗಾವಣೆ ಮಾಡಿಸಿಕೊಡುವುದಾಗಿ ಹಾಸ್ಟೆಲ್ ವಾರ್ಡನ್ ಮೇಲೆ ಲೈಂಗಿಕ ದೌರ್ಜನ್ಯ

 ದಾವಣಗೆರೆ: ವರ್ಗಾವಣೆ ಮಾಡಿಸಿಕೊಡುವುದಾಗಿ ಮಹಿಳಾ ವಾರ್ಡನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿ ವಾರ್ಡನ್ ವಿರುದ್ಧ ದಾವಣಗೆರೆಯ ವಿದ್ಯಾನಗರ ಠಾಣೆಗೆ ಮಹಿಳಾ ವಾರ್ಡನ್ ದೂರು ನೀಡಿದ್ದಾರೆ.

ಬಾಲಕರ ವಿದ್ಯಾರ್ಥಿ ನಿಲಯದ ವಾರ್ಡನ್ ಮೋಹನ್ ರಾಮಪ್ಪ ಪಗೋಟೆ ವಿರುದ್ಧ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿ ಬಂದಿದೆ. ಮಹಿಳಾ ವಾರ್ಡನ್ ಚನ್ನಗಿರಿ ತಾಲೂಕಿನ ಗ್ರಾಮವೊಂದರ ಹಾಸ್ಟೆಲ್ ನಲ್ಲಿ 2013ರಲ್ಲಿ ವಾರ್ಡನ್ ಆಗಿ ಕೆಲಸ ಮಾಡುತ್ತಿದ್ದರು. ಅವರ ಮಕ್ಕಳು ದಾವಣಗೆರೆಯಲ್ಲಿ ಓದುತ್ತಿದ್ದರಿಂದ ವರ್ಗಾವಣೆಗೆ ಪ್ರಯತ್ನ ನಡೆಸಿದ್ದರು.

ಈ ವೇಳೆ ದಾವಣಗೆರೆಗೆ ವರ್ಗಾವಣೆ ಮಾಡಿಸಿಕೊಡುವುದಾಗಿ ಮಹಿಳಾ ವಾರ್ಡನ್ ಮೋಹನ್ ರಾಮಪ್ಪ ಪಗೋಟೆ ಪರಿಚಯಿಸಿಕೊಂಡಿದ್ದ. 2018ರಲ್ಲಿ ದಾವಣಗೆರೆಯ ವಿದ್ಯಾರ್ಥಿ ನಿಲಯಕ್ಕೆ ಮಹಿಳಾ ವಾರ್ಡನ್ ವರ್ಗಾವಣೆಯಾಗಿದೆ. ಈ ವೇಳೆ ವರ್ಗಾವಣೆ ಪತ್ರ ನನ್ನ ಬಳಿ ಇದೆ. ಅದನ್ನು ಕೊಡುತ್ತೇನೆ ಎಂದು ನಂಬಿಸಿ ಮನೆಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಮಹಿಳಾ ವಾರ್ಡನ್ ದೂರು ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...