alex Certify ನಾಟಕೀಯ ಬೆಳವಣಿಗೆಗಳ ಮಧ್ಯೆ ತ್ರಿಪುರಾ ನೂತನ ಸಿಎಂ ಆಯ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಟಕೀಯ ಬೆಳವಣಿಗೆಗಳ ಮಧ್ಯೆ ತ್ರಿಪುರಾ ನೂತನ ಸಿಎಂ ಆಯ್ಕೆ

ತ್ರಿಪುರಾ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಂತೆಯೇ ಆಡಳಿತಾರೂಢ ಬಿಜೆಪಿ ಮುಖ್ಯಮಂತ್ರಿಯನ್ನು ಬದಲಿಸಿದೆ. ಮುಖ್ಯಮಂತ್ರಿ ಬಿಪ್ಲವ್ ಕುಮಾರ್ ದೇವ್ ಅವರಿಂದ ರಾಜೀನಾಮೆ ಪಡೆದಿರುವ ಬಿಜೆಪಿ ಆ ಸ್ಥಾನಕ್ಕೆ ಮಾಣಿಕ್ ಸಾಹಾ ಅವರನ್ನು ಕೂರಿಸಿದೆ. ಸ್ವತಃ ಬಿಪ್ಲವ್ ಅವರೇ ಸಾಹಾ ಅವರ ಹೆಸರನ್ನು ಪ್ರಸ್ತಾಪಿಸಿ ಮುಖ್ಯಮಂತ್ರಿ ಆಯ್ಕೆಯನ್ನು ಪ್ರಸ್ತಾಪಿಸಿದರು.

ಈ ಎಲ್ಲಾ ಪ್ರಕ್ರಿಯೆಯೂ ಸುಸೂತ್ರವಾಗಿ ನಡೆಯಿತು. ಆದರೆ, ಇದಕ್ಕೂ ಮುನ್ನ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಕೆಲ ಕಾಲ ನಾಟಕೀಯ ಬೆಳವಣಿಗೆಗಳು ನಡೆದವು.

ಅಗರ್ತಲಾದಲ್ಲಿ ನಡೆದ ಈ ಸಭೆಯಲ್ಲಿ ಬಿಜೆಪಿ ಶಾಸಕ ಮತ್ತು ಸಚಿವ ರಾಮ್ ಪ್ರಸಾದ್ ಪೌಲ್ ಅವರು ಮುಖ್ಯಮಂತ್ರಿಯನ್ನು ಬದಲಿಸುವ ಪಕ್ಷದ ನಿರ್ಧಾರದ ವಿರುದ್ಧ ಪ್ರತಿಭಟನೆಗೆ ಇಳಿದರು. ಈ ಘಟನೆಯ ವಿಡಿಯೋ ಇದೀಗ ವೈರಲ್ ಆಗಿದೆ.

BIG NEWS: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ತಾಲಿಬಾನಿ ಸರ್ಕಾರ ರಚನೆಯಾಗುತ್ತೆ; ಪಕ್ಷದಲ್ಲಿ ಹಿಂದೂಗಳ ಪರ ಯಾರಿದ್ದಾರೆ…..? ಸಂಸದ ಪ್ರತಾಪ್ ಸಿಂಹ ವಾಗ್ದಾಳಿ

ಸಭೆಯಲ್ಲಿ ಪೌಲ್ ದುಃಖತಪ್ತರಾಗಿ ಮುಖ್ಯಮಂತ್ರಿ ಬದಲಿಸುವ ನಿರ್ಧಾರದ ವಿರುದ್ಧ ಘೋಷಣೆ ಕೂಗಿದ್ದಾರೆ. ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ತಾವು ಕುಳಿತ್ತಿದ್ದ ಕುರ್ಚಿಯನ್ನು ಒಡೆದು ಹಾಕುವ ಪ್ರಯತ್ನ ನಡೆಸಿದ್ದಾರೆ. ಈ ಸಂದರ್ಭದಲ್ಲಿ ವೀಕ್ಷಕರಾಗಿ ಆಗಮಿಸಿದ್ದ ಕೇಂದ್ರ ಸಚಿವೆ ಪ್ರತಿಮಾ ಭೌಮಿಕ್ ಸೇರಿದಂತೆ ಇನ್ನಿತರೆ ನಾಯಕರು ಪೌಲ್ ಅವರನ್ನು ಸಮಾಧಾನಪಡಿಸುವ ಪ್ರಯತ್ನ ನಡೆಸಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.

ಮೂಲಗಳ ಪ್ರಕಾರ, ರಾಮ್ ಪ್ರಸಾದ್ ಪೌಲ್ ಅವರಿಗೆ ಮಾಣಿಕ್ ಸಾಹಾ ಅವರನ್ನು ಹೊಸ ಮುಖ್ಯಮಂತ್ರಿಯನ್ನಾಗಿ ಮಾಡುವುದು ಇಷ್ಟವಿರಲಿಲ್ಲ. ಈ ಕಾರಣಕ್ಕಾಗಿಯೇ ಅವರು ಪಕ್ಷದ ವೇದಿಕೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...