alex Certify ಬೆಂಗಳೂರಿಗರಿಗೆ ʻವಾಟರ್ ಶಾಕ್ʼ : ನೀರಿನ ದರ ಹೆಚ್ಚಳಕ್ಕೆ ಸಿದ್ಧತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿಗರಿಗೆ ʻವಾಟರ್ ಶಾಕ್ʼ : ನೀರಿನ ದರ ಹೆಚ್ಚಳಕ್ಕೆ ಸಿದ್ಧತೆ

ಬೆಂಗಳೂರು : ಬೆಂಗಳೂರಿನ ಜನತೆಗೆ ರಾಜ್ಯ ಸರ್ಕಾರವು ಮತ್ತೊಂದು ಶಾಕ್‌ ನೀಡಿದ್ದು, ನೀರಿನ ದರ ಪರಿಷ್ಕರಣೆಗೆ  ಸಿದ್ಧತೆ ನಡೆಸಲಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಬೈರತಿ ಸುರೇಶ್‌, ಬೆಂಗಳೂರು ನಗರದಲ್ಲಿ ಕಳೆದ 10-12ವರ್ಷಗಳಿಂದ ನೀರಿನ ದರ ಪರಿಷ್ಕರಣೆ ಮಾಡಿಲ್ಲ. ಹೀಗಾಗಿ ಸ್ವಲ್ಪ ಮಟ್ಟಿಗೆ ನೀರಿನ ಶುಲ್ಕ ಹೆಚ್ಚಳ ಮಾಡುತ್ತಿದ್ದೇವೆ. ಇದರಿಂದ ಜನರಿಗೆ ಸ್ವಲ್ಪ ಹೊರೆಯಾಗಲಿದೆ ಎಂದು ಹೇಳಿದ್ದಾರೆ.

ಕಾಲಕಾಲಕ್ಕೆ ಬೆಲೆಗಳು ಪರಿಷ್ಕರಣೆ  ಆಗುವುದು ಸಹಜ, ಆದರೆ ನೀರಿನ ದರದ ವಿಚಾರದಲ್ಲಿ ಆಗಿಲ್ಲ. ಹೀಗಾಗಿ ನೀರಿನ ದರ ಪರಿಷ್ಕರಣೆ ಮಾಡುತ್ತಿದ್ದು, ಸ್ವಲ್ಪ ಮಟ್ಟಿಗೆ ಜನರಿಗೆ ಹೊರೆಯಾಗಬಹುದು. ಹಲವು ಬಾರಿ ವಿದ್ಯುತ್‌ ಶುಲ್ಕ ಹೆಚ್ಚಳವಾಗಿದೆ. ನೀರಿನ ಪೂರೈಕೆ ವೆಚ್ಚ ಹೆಚ್ಚಾಗಿದೆ. ಹೀಗಾಗಿ ಅನಿವಾರ್ಯವಾಗಿ ಅಲ್ಪ ಪ್ರಮಾಣದಲ್ಲಿ ದರ ಹೆಚ್ಚಳ ಮಾಡಬೇಕಾಗಿದೆ ಎಂದು ತಿಳಿಸಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...