
ಬೆಂಗಳೂರು: ಕಲ್ಯಾಣ ಮಂಟಪಕ್ಕೆ ನುಗ್ಗಿದ ಅಪರಿಚಿತ 8 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿದ್ದು, ಮದುವೆ ಸಂಭ್ರಮದಲ್ಲಿದ್ದವರಿಗೆ ಶಾಕ್ ಆಗಿದೆ.
ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ರಾಜರಾಜೇಶ್ವರಿ ಕಲ್ಯಾಣ ಮಂಟಪಕ್ಕೆ ನುಗ್ಗಿದ ಅಪರಿಚಿತ 8 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಒಡವೆ ಕಳೆದುಕೊಂಡ ಕುಟುಂಬದವರು ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ. ಕಲ್ಯಾಣ ಮಂಟಪಕ್ಕೆ ಆನೇಕಲ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿನ್ನಾಭರಣ ದೋಚಿದ ಕಳ್ಳನ ಪತ್ತೆಗೆ ಬಲೆ ಬೀಸಿದ್ದಾರೆ.