alex Certify SSLC, PUC ನಂತರ ಮುಂದೇನು..? : ವಿದ್ಯಾರ್ಥಿಗಳಿಗೆ ಆಕಾಶವಾಣಿಯಲ್ಲಿ ವಿಶೇಷ ಕಾರ್ಯಕ್ರಮ ಪ್ರಸಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SSLC, PUC ನಂತರ ಮುಂದೇನು..? : ವಿದ್ಯಾರ್ಥಿಗಳಿಗೆ ಆಕಾಶವಾಣಿಯಲ್ಲಿ ವಿಶೇಷ ಕಾರ್ಯಕ್ರಮ ಪ್ರಸಾರ

ಶಿವಮೊಗ್ಗ : ಎಸ್.ಎಸ್.ಎಲ್.ಸಿ, ಪಿ.ಯು.ಸಿ ಮುಗಿಸಿದ ವಿದ್ಯಾರ್ಥಿಗಳಿಗೆ ಮುಂದೆ ಯಾವ ಕೋರ್ಸ್ ಆಯ್ಕೆ ಮಾಡಿಕೊಂಡರೆ ಒಳ್ಳೆಯ ಭವಿಷ್ಯವಿದೆ, ಯಾವ ಕೋರ್ಸ್ ಆಯ್ಕೆ ಮಾಡಿಕೊಂಡರೆ ಯಾವರೀತಿಯ ಉದ್ಯೋಗಕ್ಕೆ ಹೋಗಬಹುದು.

ಪೋಷಕರು, ವಿದ್ಯಾರ್ಥಿಗಳಿಗೆ ಹೇಗೆ ಮಾರ್ಗದರ್ಶನ ನೀಡಬಹುದು ಮುಂತಾದ ವಿಷಯಗಳನ್ನು ಒಳಗೊಂಡ ವಿಶೇಷ ಕಾರ್ಯಕ್ರಮ ಸರಣಿ “ವೃತ್ತಿಶಿಕ್ಷಣ ಮಾರ್ಗದರ್ಶನ” ಆಕಾಶವಾಣಿ ಭದ್ರಾವತಿ ಕೇಂದ್ರದಿಂದ ಜೂನ್ 28 ರಿಂದ ಪ್ರತಿ ಶುಕ್ರವಾರ ಬೆಳಿಗ್ಗೆ 9.05ರಿಂದ 9.20ರವರೆಗೆ ಪ್ರಸಾರವಾಗಲಿದೆ.

ಪಿ.ಇ.ಎಸ್ ಸಮೂಹ ಶಿಕ್ಷಣ ಸಂಸ್ಥೆ ಶಿವಮೊಗ್ಗ ಸಹಯೋಗದಲ್ಲಿ ಪ್ರಸಾರವಾಗುವ ಈ ಸರಣಿಗೆ ಶಿವಮೊಗ್ಗ ಸಂಸದರು ಹಾಗೂ ಪಿ.ಇ.ಎಸ್ ಸಮೂಹ ಸಂಸ್ಥೆಯ ಕಾರ್ಯದರ್ಶಿಗಳಾದ ಬಿ.ವೈ.ರಾಘವೇಂದ್ರ ಅವರಿಂದ ಚಾಲನೆ ಸಿಗಲಿದೆ. ಪಿ.ಇ.ಎಸ್ ಸಮೂಹ ಶಿಕ್ಷಣ ಸಂಸ್ಥೆಯ ಕೆರಿಯರ್ ಗೈಡೆನ್ಸ್ ಸೆಲ್ನ ಪರಿಣಿತರು, ಪ್ರಾಂಶುಪಾಲರು ಹಾಗೂ ಪ್ರತಿ ವಿಭಾಗದ ಮುಖ್ಯಸ್ಥರು ಮಾಹಿತಿ ನೀಡುವ ಈ ಸರಣಿ, ಆಕಾಶವಾಣಿ ಭದ್ರಾವತಿ ಅಮೃತ ಮಹೋತ್ಸವ ವರ್ಷಾಚರಣೆಯ ಸಂದರ್ಭದಲ್ಲಿ ವರ್ಷಪೂರ್ತಿ ಪ್ರಸಾರವಾಗಲಿದೆ (52 ಕಾರ್ಯಕ್ರಮ) ಎಂದು ಕಾರ್ಯಕ್ರಮ ಮುಖ್ಯಸ್ಥರಾದ ಎಸ್.ಅರ್.ಭಟ್ ತಿಳಿಸಿದ್ದಾರೆ.

ಈ ಕಾರ್ಯಕ್ರಮವನ್ನು FM 103.5 ಹಾಗೂ MW 675 khz ನಲ್ಲಿ ಕೇಳುವದರೊಟ್ಟಿಗೆ ಜಗತ್ತಿನಾದ್ಯಂತAkashavani Bhadravathi live streaming ಮತ್ತು prasarbharati news on air app ನಲ್ಲಿ ಪ್ರಸಾರ ಸಮಯದಲ್ಲಿ ಕೇಳಬಹುದು ಹಾಗೂAkashavani Bhadravathi YouTube ನಲ್ಲಿ ಪ್ರಸಾರ ನಂತರವೂ ಕೇಳಬಹುದು.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...