alex Certify ಮೈಸೂರಲ್ಲಿ ‘ವ್ಹೀಲಿಂಗ್’ ಮಾಡಿ ಅಟ್ಟಹಾಸ ಮೆರೆದ ಪುಂಡರು : ಶಿಕ್ಷಕಿಗೆ ಗಂಭೀರ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೈಸೂರಲ್ಲಿ ‘ವ್ಹೀಲಿಂಗ್’ ಮಾಡಿ ಅಟ್ಟಹಾಸ ಮೆರೆದ ಪುಂಡರು : ಶಿಕ್ಷಕಿಗೆ ಗಂಭೀರ ಗಾಯ

ಮೈಸೂರು : ಮೈಸೂರಿನಲ್ಲಿ ವ್ಹೀಲಿಂಗ್ ಮಾಡಿ ಪುಂಡರು ಅಟ್ಟಹಾಸ ಮೆರೆದಿದ್ದು, ಶಿಕ್ಷಕಿಗೆ ಗಂಭೀರ ಗಾಯಗಳಾಗಿದೆ.

ಮೈಸೂರಿನಲ್ಲಿ ಪೊಲೀಸರು ವ್ಹೀಲಿಂಗ್ ಮಾಡುವವರನ್ನು ಹಿಡಿದು ಕೇಸ್ ಹಾಕಿದ್ರೂ ಬುದ್ದಿ ಕಲಿಯದ ಪುಂಡರು ಮತ್ತೆ ತಮ್ಮ ಚಾಳಿ ಮುಂದುವರೆಸಿದ್ದಾರೆ.

ಜುಲೈ 18 ರಂದು ಮೈಸೂರಿನಲ್ಲಿ ಈ ಘಟನೆ ನಡೆದಿದ್ದು, ಗಾಯತ್ರಿಪುರಂ ಚರ್ಚ್ ಬಳಿ ಬೈಕ್ ನಲ್ಲಿ ತ್ರಿಬಲ್ ರೈಡಿಂಗ್ ನಲ್ಲಿ ವ್ಹೀಲಿಂಗ್ ಮಾಡಿಕೊಂಡು ಬಂದ ಹುಡುಗರು ಸ್ಕೂಟಿಯಲ್ಲಿ ಸಾಗುತ್ತಿದ್ದ ಶಿಕ್ಷಕಿಗೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ಶಿಕ್ಷಕಿ ತಲೆಗೆ ಗಂಭೀರ ಗಾಯಗಳಾಗಿದೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಶಿಕ್ಷಕಿಯನ್ನು ಸಾರ್ವಜನಿಕರು ಆಸ್ಪತ್ರೆ ಸೇರಿಸಿದ್ದು, ಸದ್ಯ ಶಿಕ್ಷಕಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಸಿದ್ದಾರ್ಥ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...