ಬೆಂಗಳೂರು : ಕಾಂಗ್ರೆಸ್ ಗೆ ಯಾರು ಬೇಕಾದರೂ ಬರಬಹುದು, ಯಾರೇ ಬಂದರೂ ಸ್ವಾಗತ ಎಂದು ಸಚಿವ H.C.ಮಹದೇವಪ್ಪ ಹೇಳಿದ್ದಾರೆ.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ನಾವು ಮನೆ ಮನೆಗೆ ಹೋಗಿ ನೀವು ಬನ್ನಿ ಬನ್ನಿ ಅಂತಾ ಕರೆಯುತ್ತಿಲ್ಲ. ನಮ್ಮ ಪಕ್ಷದ ಬಾಗಿಲು ತೆರೆದಿದೆ. ಸರ್ಕಾರದ ಯೋಜನೆ ನೋಡಿ ಯಾರು ಬೇಕಾದರೂ ಬರಬಹುದು, ಕಾಂಗ್ರೆಸ್ ಗೆ ಯಾರು ಬೇಕಾದರೂ ಬರಬಹುದು, ಯಾರೇ ಬಂದರೂ ಸ್ವಾಗತ ಎಂದು ಸಚಿವ H.C.ಮಹದೇವಪ್ಪ ಹೇಳಿದ್ದಾರೆ.
ಮೈಸೂರಿನಲ್ಲಿ ಯಾವುದೇ ಮುಖಂಡರು ಪಕ್ಷಕ್ಕೆ ಬಂದರೇ ಸ್ವಾಗತ. ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಪ್ಪಿ ಯಾರೇ ಬಂದರೂ ಸ್ವಾಗತ ಎಂದು ಸಚಿವ H.C.ಮಹದೇವಪ್ಪ ಹೇಳಿದ್ದಾರೆ.ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಕಾಂಗ್ರೆಸ್ ಆಪರೇಷನ್ ಹಸ್ತಕ್ಕೆ ಮುಂದಾಗಿದ್ದು. ಹಲವು ವಲಸಿಗ ನಾಯಕರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲು ಸಿದ್ಧತೆ ನಡೆಸಿದೆ. ಆದರೆ ಆಪರೇಷನ್ ಹಸ್ತದ ಕುರಿತು ಹಲವು ಕಾಂಗ್ರೆಸ್ ಶಾಸಕರು ವಿರೋಧ ವ್ಯಕ್ತಪಡಿಸಿದ್ದಾರೆ.