ಚಿಕ್ಕಮಗಳೂರು : ಗಂಡನ ಅನೈತಿಕ ಸಂಬಂಧಕ್ಕೆ ಹೆಂಡತಿ ಅಡ್ಡಿ, ವಿಷದ ಇಂಜೆಕ್ಷನ್ ಚುಚ್ಚಿಸಿ ಕೊಲೆ..!

ಚಿಕ್ಕಮಗಳೂರು : ಪಾಪಿ ಪತಿಯೋರ್ವ ವಿಷದ ಇಂಜೆಕ್ಷನ್ ಚುಚ್ಚಿಸಿ ಪತ್ನಿಯನ್ನು ಕೊಲೆ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ದೇವರಿಂದ ಗ್ರಾಮದಲ್ಲಿ ಮಹಿಳೆಯೊಬ್ಬರು ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾರೆ. . ಮೃತ ಮಹಿಳೆಯನ್ನು ಶ್ವೇತ (31) ಎಂದು ಗುರುತಿಸಲಾಗಿದ್ದು, ಪತಿ ದರ್ಶನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಪತ್ನಿಗೆ ಪತಿ ದರ್ಶನ್ ವಿಷದ ಇಂಜೆಕ್ಷನ್ ನೀಡಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದ್ದು, ಪತಿ ದರ್ಶನ್ ವಿರುದ್ಧ ಮೃತ ಶ್ವೇತಾ ಪೋಷಕರು ಈ ಆರೋಪ ಮಾಡಿದ್ದಾರೆ. ದರ್ಶನ್ ವಿರುದ್ಧ ಅನೈತಿಕ ಸಂಬಂಧ ಆರೋಪ ಕೂಡ ಕೇಳಿಬಂದಿದ್ದು, ಇದಕ್ಕೆ ಪತ್ನಿ ಅಡ್ಡಿಯಾಗಿದ್ದಕ್ಕೆ ದರ್ಶನ್ ಕೊಲೆ ಮಾಡಿದ್ದಾನೆ ಎಂದು ಮೃತ ಮಹಿಳೆಯರ ಕುಟುಂಬದವರು ಆರೋಪ ಮಾಡುತ್ತಿದ್ದಾರೆ. ಸದ್ಯ, ದರ್ಶನ್ ನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read