alex Certify ರಾಜಕೀಯ ನಿವೃತ್ತಿ ಮಾತುಗಳನ್ನಾಡಿ ಅಚ್ಚರಿ ಮೂಡಿಸಿದ ಬಿಜೆಪಿ ಹಿರಿಯ ನಾಯಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜಕೀಯ ನಿವೃತ್ತಿ ಮಾತುಗಳನ್ನಾಡಿ ಅಚ್ಚರಿ ಮೂಡಿಸಿದ ಬಿಜೆಪಿ ಹಿರಿಯ ನಾಯಕ

ನಮ್ಮ ಕೈಗೆ ಅಧಿಕಾರವನ್ನ ನೀಡಿದಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ಒಬಿಸಿಗೆ ಮೀಸಲಾತಿ ನೀಡಲಾಗುವುದು ಎಂದು ಬಿಜೆಪಿ ಹಿರಿಯ ನಾಯಕ ದೇವೇಂದ್ರ ಫಡ್ನವೀಸ್​ ಹೇಳಿದ್ದಾರೆ. ಇಲ್ಲವಾದಲ್ಲಿ ತಾವು ರಾಜಕೀಯದಿಂದಲೇ ನಿವೃತ್ತಿ ಹೊಂದಲಿದ್ದೇನೆ ಎಂದು ಹೇಳಿದ್ದಾರೆ.

ಸ್ಕ್ವೇರ್​ ಚೌಕ್​​ನಲ್ಲಿ ಬಿಜೆಪಿ ಕಾರ್ಯಕರ್ತರು ನಡೆಸುತ್ತಿರುವ ಚಕ್ಕಾ ಜಾಮ್​ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಫಡ್ನವೀಸ್​, ಸರ್ಕಾರ ಓಬಿಸಿ ಕೋಟಾಗೆ ಮೀಸಲಾತಿ ನೀಡುವ ಬಗ್ಗೆ ಕೇಂದ್ರದ ಜೊತೆ ಮಾತನಾಡುತ್ತೇನೆ ಎಂದು ಹೇಳಿ ಜನರ ದಾರಿಯನ್ನ ತಪ್ಪಿಸುತ್ತಿದೆ. ಇದು ರಾಜ್ಯಮಟ್ಟದಲ್ಲಿಯೇ ಬಗೆಹರಿಸಬಹುದಾದ ಸಮಸ್ಯೆಯಾಗಿದೆ. ಆದರೆ ಮಹಾರಾಷ್ಟ್ರ ಸರ್ಕಾರ ಕೇಂದ್ರದ ಹೆಸರನ್ನು ಹೇಳಿ ತಾನು ತಪ್ಪಿಸಿಕೊಳ್ತಿದೆ.

ಪರೀಕ್ಷೆ ಬರೆದವರಿಗೆ ತಮ್ಮ ಹಣೆಬರಹ ಗೊತ್ತಿರುತ್ತೆ: ಯೋಗೇಶ್ವರ್ ಗೆ ರೇಣುಕಾಚಾರ್ಯ ತಿರುಗೇಟು

ಮಹಾರಾಷ್ಟ್ರ ಹೊರತುಪಡಿಸಿ ಮಿಕ್ಕೆಲ್ಲ ಕಡೆ ಒಬಿಸಿ ಕೋಟಾ ಜಾರಿಯಲ್ಲಿದೆ. ಈಗಿರುವ ಕಾನೂನಿನಲ್ಲಿ ಕೆಲ ಬದಲಾವಣೆ ಮಾಡಿ ಮಹಾರಾಷ್ಟ್ರ ಸರ್ಕಾರ ಓಬಿಸಿ ಕೋಟಾವನ್ನ ಮತ್ತೆ ಜಾರಿಗೆ ತರಬಹುದು. ಆದರೆ ಈ ವಿಚಾರದಲ್ಲಿ ಸರ್ಕಾರದ ನಡೆಯನ್ನ ಖಂಡಿಸಿ ನಾವು ಪ್ರತಿಭಟನೆಯನ್ನ ಮಾಡುತ್ತಿದ್ದೇವೆ ಎಂದು ಹೇಳಿದ್ರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...