alex Certify ಸೌದಿ ಅರೇಬಿಯಾಗೆ ಹೊರಟಿದ್ದ ಏರ್​ ಇಂಡಿಯಾ ವಿಮಾನ ಕೇರಳದಲ್ಲಿ ತುರ್ತು ಭೂಸ್ಪರ್ಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೌದಿ ಅರೇಬಿಯಾಗೆ ಹೊರಟಿದ್ದ ಏರ್​ ಇಂಡಿಯಾ ವಿಮಾನ ಕೇರಳದಲ್ಲಿ ತುರ್ತು ಭೂಸ್ಪರ್ಶ

ಕೇರಳದಿಂದ ಸೌದಿ ಅರೇಬಿಯಾಗೆ ಹೊರಟಿದ್ದ ಏರ್​ ಇಂಡಿಯಾ ಎಕ್ಸ್​ಪ್ರೆಸ್​ ವಿಮಾನವು ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ವಿಮಾನ ನಿಲ್ದಾಣದ ಅಧಿಕಾರಿಗಳು ನೀಡಿರುವ ಮಾಹಿತಿಯ ಪ್ರಕಾರ ವಿಂಡ್​ಶೀಲ್ಡ್​ನಲ್ಲಿ ಬಿರುಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪೈಲಟ್​ ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.
ಏರ್​ ಇಂಡಿಯಾ ವಿಮಾನವು ಬೆಳಗ್ಗೆ 7:52ಕ್ಕೆ ತಿರುವನಂತಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್​ ಆಗಿತ್ತು. ಇದಾದ ಬಳಿಕ ವಿಂಡ್​ಶೀಲ್ಡ್​​ನಲ್ಲಿ ಬಿರುಕು ಕಾಣಿಸಿರೋದು ಪೈಲಟ್​ಗಳ ಗಮನಕ್ಕೆ ಬಂದಿದೆ. ಹೀಗಾಗಿ ತಿರುವನಂತಪುರಂಗೆ ಹಿಂದಿರುಗಿದ ವಿಮಾನವು 8:50ಕ್ಕೆ ತುರ್ತು ಭೂಸ್ಪರ್ಶ ಮಾಡಿದೆ.

ಕೊರೊನಾ ವೈರಸ್​ ನಿರ್ಬಂಧದ ಹಿನ್ನೆಲೆಯಲ್ಲಿ ವಿಮಾನದಲ್ಲಿ ಯಾವುದೇ ಪ್ರಯಾಣಿಕರು ಇರಲಿಲ್ಲ ಎಂದು ತಿಳಿದು ಬಂದಿದೆ. ವಿಮಾನದಲ್ಲಿ ಕೇವಲ 8 ಮಂದಿ ಸಿಬ್ಬಂದಿ ಇದ್ದರು ಎನ್ನಲಾಗಿದೆ.

ವಿಮಾನದಲ್ಲಿರುವ ಎಲ್ಲಾ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ತಿರುವನಂತಪುರಂ ವಿಮಾನ ನಿಲ್ದಾಣ ನಿರ್ದೇಶಕ ಸಿ.ವಿ. ರವೀಂದ್ರನ್​​ ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...