
ಬೀದರ್: ಬೀದರ್ ಜಿಲ್ಲೆಯ ಹೊಕ್ರಾಣ ಗ್ರಾಮದಲ್ಲಿ ಕಾಡು ಹಂದಿ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಮೃತಪಟ್ಟಿದ್ದಾರೆ. ಅವರ ಕುಟುಂಬದವರಿಗೆ ರಾಜ್ಯ ಸರ್ಕಾರದಿಂದ ಪರಿಹಾರ ವಿತರಿಸಲಾಗಿದೆ.
ಕವಿತಾ(45) ಮೃತಪಟ್ಟ ಮಹಿಳೆ. ಕೂಲಿ ಕೆಲಸಕ್ಕೆ ಹೊಲಕ್ಕೆ ಹೋಗಿದ್ದ ಅವರ ಮೇಲೆ ಕಾಡು ಹಂದಿ ದಾಳಿ ಮಾಡಿ ಹೊಟ್ಟೆಗೆ ಕಚ್ಚಿದೆ. ಗಂಭೀರವಾಗಿ ಗಾಯಗೊಂಡಿದ್ದ ಕವಿತಾ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದರು. ಅರಣ್ಯ ಸಚಿವ ಈಶ್ವರ್ ಖಂಡ್ರೆ ಮೃತರ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ 15 ಲಕ್ಷ ರೂ. ಪರಿಹಾರದ ಚೆಕ್ ವಿಚರಿಸಿದ್ದಾರೆ. ಇಂತಹ ಘಟನೆ ನಡೆಯದಂತೆ ಎಚ್ಚರಿಕೆ ವಹಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದ್ದಾರೆ.