alex Certify ಹೆಣ್ಣುಮಕ್ಕಳ ದಿನದಂದೇ ಪೋಷಕರಿಂದ ಘೋರ ಕೃತ್ಯ: ತಡರಾತ್ರಿ ಬೆತ್ತಲೆಗೊಳಿಸಿ ಪೂಜೆ ಮಾಡಿ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೆಣ್ಣುಮಕ್ಕಳ ದಿನದಂದೇ ಪೋಷಕರಿಂದ ಘೋರ ಕೃತ್ಯ: ತಡರಾತ್ರಿ ಬೆತ್ತಲೆಗೊಳಿಸಿ ಪೂಜೆ ಮಾಡಿ ಹತ್ಯೆ

ಆಂಧ್ರಪ್ರದೇಶದ ಮದನಪಲ್ಲಿಯಲ್ಲಿ ಭೀಕರ ಘಟನೆಯೊಂದು ನಡೆದಿದೆ. ಪೋಷಕರೇ ಇಬ್ಬರು ಮಕ್ಕಳನ್ನು ಹತ್ಯೆ ಮಾಡಿದ್ದಾರೆ.

22 ಮತ್ತು 27 ವರ್ಷ ವಯಸ್ಸಿನ ಇಬ್ಬರು ಹೆಣ್ಣುಮಕ್ಕಳನ್ನು ಬೆತ್ತಲೆಗೊಳಿಸಿ ಪೂಜೆ ಮಾಡಿದ ಪೋಷಕರು. ಡಂಬಲ್ಸ್ ನಿಂದ ಹೊಡೆದು ಹತ್ಯೆಮಾಡಿದ್ದಾರೆ. ಮೃತಪಟ್ಟವರನ್ನು ಅಲೈಖ್ಯಾ ಮತ್ತು ಸಾಯಿ ದಿವ್ಯಾ ಎಂದು ಗುರುತಿಸಲಾಗಿದೆ.

ಸರ್ಕಾರಿ ಮಹಿಳಾ ಕಾಲೇಜಿನ ಪ್ರಾಂಶುಪಾಲ ಪುರುಷೋತ್ತಮ ನಾಯ್ಡು ಮತ್ತು ಅವರ ಪತ್ನಿ ಇಂತಹ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಮದನಪಲ್ಲಿ ಶಿವಾಲಯಂ ದೇವಾಲಯದ ರಸ್ತೆ ಬಳಿ ಘಟನೆ ನಡೆದಿದೆ. ಭಾನುವಾರ ರಾತ್ರಿ ಪೂಜೆ ಮಕ್ಕಳನ್ನು ಬೆತ್ತಲೆಗೊಳಿಸಿ ಪೂಜೆ ಮಾಡಿದ ದಂಪತಿ ಕೊಲೆ ಮಾಡಿದ್ದಾರೆ. ಅವರಿಗೆ ಮರುದಿನ ಜೀವ ಬರುತ್ತದೆ ಎಂದು ಕಪಟ ಸ್ವಾಮಿಯೊಬ್ಬನ ಮಾತು ನಂಬಿ ಇಂತಹ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...