alex Certify ಮಹಿಳೆಯನ್ನು ಕೊಂದು ಪೊಲೀಸರಿಗೆ ಶರಣಾದ ವ್ಯಕ್ತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳೆಯನ್ನು ಕೊಂದು ಪೊಲೀಸರಿಗೆ ಶರಣಾದ ವ್ಯಕ್ತಿ

ತುಮಕೂರು: ವ್ಯಕ್ತಿಯೋರ್ವ ಮಹಿಳೆಯ ಕತ್ತು ಹಿಸುಕಿ ಕೊಲೆಗೈದು ಬಳಿಕ ಪೊಲೀಸ್ ಠಾಣೆಗೆ ಬಂದು ಶರಣಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ಲಕ್ಷ್ಮಮ್ಮ ಕೊಲೆಯಾದ ಮಹಿಳೆ. ದಾವಣಗೆರೆ ಮೂಲದ ಮಂಜುನಾಥ್ ಮಹಿಳೆಯನ್ನು ಕೊಂದ ಆರೋಪಿ. ಲಕ್ಷ್ಮಮ್ಮ ವಿವಾಹವಾಗಿ ಪತಿಯಿಂದ ದೂರವಿದ್ದಳು. ಲಕ್ಷ್ಮಮ್ಮ ಹಾಗೂ ಮಂಜುನಾಥ್ ನಿನ್ನೆ ತುಮಕೂರಿನ ದಿವ್ಯ ಲಾಡ್ಜ್ ನಲ್ಲಿ ತಂಗಿದ್ದರು. ಇಂದು ಮಂಜುನಾಥ್, ಮಹಿಳೆಯ ಕತ್ತು ಹಿಸುಕಿ ಆಕೆಯನ್ನು ಕೊಲೆ ಮಾಡಿದ್ದಾನೆ.

ಕೃತ್ಯದ ಬಳಿಕ ಪೊಲೀಸ್ ಠಾಣೆಗೆ ಬಂದು ಆರೋಪಿ ಶರಣಾಗಿದ್ದಾನೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...