alex Certify BIG NEWS: ‘ವಂದೇ ಭಾರತ್’ ಎಕ್ಸ್ ಪ್ರೆಸ್ ರೈಲಿಗೆ ಸಿಲುಕಿ ಮಹಿಳೆ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ‘ವಂದೇ ಭಾರತ್’ ಎಕ್ಸ್ ಪ್ರೆಸ್ ರೈಲಿಗೆ ಸಿಲುಕಿ ಮಹಿಳೆ ಸಾವು

ಸೆಮಿ ಹೈಸ್ಪೀಡ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿ 54 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಮಂಗಳವಾರ ಗುಜರಾತ್‌ನ ಆನಂದ್ ರೈಲು ನಿಲ್ದಾಣದ ಬಳಿ ಮುಂಬೈಗೆ ತೆರಳುತ್ತಿದ್ದ ರೈಲಿಗೆ ಸಿಲುಕಿ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.

ಮೃತ ಮಹಿಳೆಯನ್ನು ಬೀಟ್ರಿಸ್ ಆರ್ಚಿಬಾಲ್ಡ್ ಪೀಟರ್ ಎಂದು ಗುರುತಿಸಲಾಗಿದ್ದು, ಸಂಜೆ 4.37 ಕ್ಕೆ ಹಳಿ ದಾಟುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.‌

ಅಹಮದಾಬಾದ್‌ನ ನಿವಾಸಿ ಬೀಟ್ರಿಸ್ ಆರ್ಚಿಬಾಲ್ಡ್ ಪೀಟರ್, ಆನಂದ್‌ನಲ್ಲಿರುವ ಸಂಬಂಧಿಕರನ್ನು ಭೇಟಿಯಾಗಲು ತೆರಳುತ್ತಿದ್ದರು ಎಂದು ತಿಳಿದುಬಂದಿದೆ. ರೈಲು ಗಾಂಧಿನಗರ ರಾಜಧಾನಿ ನಿಲ್ದಾಣದಿಂದ ಮುಂಬೈ ಸೆಂಟ್ರಲ್‌ಗೆ ತೆರಳುತ್ತಿತ್ತು. ಆನಂದ್‌ನಲ್ಲಿ ಅದಕ್ಕೆ ನಿಲುಗಡೆ ಇಲ್ಲ. ಅಪಘಾತದ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 30 ರಂದು ವಂದೇ ಭಾರತ್ ರೈಲು ಸಂಚಾರಕ್ಕೆ ಚಾಲನೆ ನೀಡಿದ್ದರು.
ಕಳೆದ ಒಂದು ತಿಂಗಳಲ್ಲಿ ರೈಲಿಗೆ ಸಿಲುಕಿ ದನಕರುಗಳು ಹಳಿಯಲ್ಲಿ ಸಾವನ್ನಪ್ಪಿದ ಘಟನೆಗಳು ಮೂರು ಬಾರಿ ನಡೆದಿವೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...