alex Certify ಗೃಹಿಣಿ ಅನುಮನಾಸ್ಪದವಾಗಿ ಸಾವು; ಪತಿಯೇ ಕೊಲೆಗೈದಿರುವ ಶಂಕೆ; ಪೋಷಕರ ಆರೋಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗೃಹಿಣಿ ಅನುಮನಾಸ್ಪದವಾಗಿ ಸಾವು; ಪತಿಯೇ ಕೊಲೆಗೈದಿರುವ ಶಂಕೆ; ಪೋಷಕರ ಆರೋಪ

ಹಾಸನ: ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ನಾಗಯ್ಯನಕೊಪ್ಪಲು ಗ್ರಾಮದಲ್ಲಿ ನಡೆದಿದೆ.

ಪತಿಯೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸುರಭಿ (24) ಮೃತ ಮಹಿಳೆ. ಮೂರು ವರ್ಷಗಳ ಹಿಂದೆ ಸುರಭಿ ನಾಗಯ್ಯನಕೊಪ್ಪಲು ನಿವಾಸಿ ದರ್ಶನ್ ಎಂಬುವವರ ಜೊತೆ ವಿವಾಹವಾಗಿದ್ದರು.

ಎರಡು ವರ್ಷಗಳಿಂದ ಸುರಭಿಗೆ ಪತಿ ಕಿರುಕುಳ ನೀಡುತ್ತಿದ್ದ ಎಂದು ಸುರಭಿ ಪೋಷಕರು ಆರೋಪಿಸಿದ್ದಾರೆ. ಇದೀಗ ಸುರಭಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. ನಿಮ್ಮ ಮಗಳು ಲೋ ಬಿಪಿಯಿಂದ ಸಾವನ್ನಪ್ಪಿದ್ದಾಗಿ ಪತಿ ದರ್ಶನ್ ಹಾಗೂ ಮನೆಯವರು ಹೇಳುತ್ತಿದ್ದಾರೆ. ಆದರೆ ಸುರಭಿಯದ್ದು ಸಹಜ ಸಾವನ್ನಲ್ಲ. ಪತಿಯೇ ಕೊಲೆ ಮಾಡಿ ನಾಟಕವಾಡುತ್ತಿದ್ದಾನೆ ಎಂದು ಪೋಷಕರು ದೂರು ನೀಡಿದ್ದಾರೆ.

ಶ್ರವಣಬೆಳಗೊಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...