alex Certify BIG NEWS: ಬಸ್ ನಿಲ್ದಾಣದಲ್ಲಿ ಮಕ್ಕಳನ್ನು ಬಿಟ್ಟು ಸಮುದ್ರಕ್ಕೆ ಹಾರಿ ಮಹಿಳೆ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಸ್ ನಿಲ್ದಾಣದಲ್ಲಿ ಮಕ್ಕಳನ್ನು ಬಿಟ್ಟು ಸಮುದ್ರಕ್ಕೆ ಹಾರಿ ಮಹಿಳೆ ಆತ್ಮಹತ್ಯೆ

ಕುಮಟಾ: ಸಮುದ್ರಕ್ಕೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಬಳಿ ನಡೆದಿದೆ.

ಮನೆಯಿಂದ ಸ್ಕೂಟಿಯಲ್ಲಿ ಬಂದ ಮಹಿಳೆ ತನ್ನ ಇಬ್ಬರು ಮಕ್ಕಳನ್ನು ಬಸ್ ನಿಲ್ದಾಣದ ಬಳಿ ಬಿಟ್ಟು ಬಳಿಕ ಮಾಂಗಲ್ಯ ಸರ, ಕಾಲುಂಗುರಗಳನ್ನು ಸ್ಕೂಟಿಯೊಳಗೆ ಇಟ್ಟು ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಹಿಳೆ ಸಮುದ್ರಕ್ಕೆ ಹಾರುತ್ತಿದ್ದಂತೆ ಗಮನಿಸಿದ ಲೈಫ್ ಗಾರ್ಡ್ ಸಿಬ್ಬಂದಿ, ತಕ್ಷಣ ಸಮುದ್ರಕ್ಕೆ ಇಳಿದು ಆಕೆಯನ್ನು ರಕ್ಷಿಸಲು ಯತ್ನಿಸಿದ್ದಾರೆ. ಆದರೆ ಅಲೆಗಳ ಅಬ್ಬರಕ್ಕೆ ಸಿಲುಕಿದ ಮಹಿಳೆ ಕಣ್ಮರೆಯಾಗಿದ್ದಾರೆ. ಮಹಿಳೆಗಾಗಿ ಸಮುದ್ರದಲ್ಲಿ ಶೋಧಕಾರ್ಯ ಮುಂದುವರೆದಿದೆ.

ಘಟನಾ ಸ್ಥಳಕ್ಕೆ ಕುಮಟಾ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಮುದ್ರದ ದಡದಲ್ಲಿ ನಿಂತು ಮಕ್ಕಳಿಬ್ಬರು ಕಣ್ಣೀರಿಟ್ಟಿದ್ದಾರೆ. ಮಹಿಳೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...