ಬೆಂಗಳೂರು: ರಾಜ್ಯದ ನಾನಾ ಇಲಾಖೆಗಳು ಮತ್ತು ಸಚಿವಾಲಯದಲ್ಲಿ ಸೇವೆ ಸಲ್ಲಿಸುತ್ತಿರುವ ದೃಷ್ಟಿ ದೋಷ ಹಾಗೂ ಇತರೆ ವಿಶೇಷಚೇತನ ಅಧಿಕಾರಿಗಳು, ನೌಕರರು ಮನೆಯಿಂದಲೇ ಕಾರ್ಯನಿರ್ವಹಿಸುವಂತೆ ಸರ್ಕಾರದಿಂದ ಸುತ್ತೋಲೆ ಹೊರಡಿಸಲಾಗಿದೆ.
ಇದರಿಂದಾಗಿ 10,000 ಕ್ಕೂ ಹೆಚ್ಚು ನೌಕರರಿಗೆ ಅನುಕೂಲವಾಗಲಿದೆ. ವಿಶೇಷಚೇತನ ನೌಕರರು ವರ್ಕ್ ಫ್ರಮ್ ಹೋಮ್ ಮಾಡಬಹುದಾಗಿದೆ. ದೃಷ್ಟಿ ದೋಷ ಹಾಗೂ ಇತರ ವಿಶೇಷಚೇತನ ಅಧಿಕಾರಿಗಳು, ನೌಕರರು ಕಚೇರಿಗೆ ಹಾಜರಾಗಿ ಕರ್ತವ್ಯ ನಿರ್ವಹಿಸುವುದು ಕಷ್ಟಸಾಧ್ಯವಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಸರ್ಕಾರಿ ಅರೆ ಸರ್ಕಾರಿ ಸಂಸ್ಥೆ ನಿಗಮ-ಮಂಡಳಿಗಳಲ್ಲಿ ಕೆಲಸ ಮಾಡುತ್ತಿರುವವರು ಮನೆಯಿಂದಲೇ ಕೆಲಸ ನಿರ್ವಹಿಸಬಹುದಾಗಿದೆ ಎಂದು ಹೇಳಲಾಗಿದೆ.
ಬಸ್ ಗಳಲ್ಲಿ ಕಚೇರಿಗೆ ಬಂದು ಹೋಗಲು ತೊಂದರೆಯಾಗುವ ಹಿನ್ನೆಲೆಯಲ್ಲಿ ವಿನಾಯಿತಿ ನೀಡಲಾಗಿದೆ. ಕೋವಿಡ್ ಲಾಕ್ಡೌನ್ ಅವಧಿಯಿಂದ ಅನೇಕ ಇಲಾಖೆಗಳಲ್ಲಿ ಈ ವ್ಯವಸ್ಥೆ ಜಾರಿಗೆ ಬಂದಿದ್ದು, ಈಗ ಅಧಿಕೃತವಾಗಿ ಸುತ್ತೋಲೆ ಹೊರಡಿಸಲಾಗಿದೆ. ಇದರಿಂದ 10 ಸಾವಿರ ನೌಕರರಿಗೆ ಅನುಕೂಲವಾಗಲಿದೆ ಎನ್ನಲಾಗಿದೆ.