alex Certify ಸಿಗಂದೂರು ಸೇತುವೆ ಕಾಮಗಾರಿ ವೇಳೆ ಅವಘಡ: ಕೆಳಗೆ ಬಿದ್ದು ಕಾರ್ಮಿಕ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಗಂದೂರು ಸೇತುವೆ ಕಾಮಗಾರಿ ವೇಳೆ ಅವಘಡ: ಕೆಳಗೆ ಬಿದ್ದು ಕಾರ್ಮಿಕ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತುಮರಿ ಸಮೀಪ ಸಿಗಂದೂರು ಸೇತುವೆ ಕಾಮಗಾರಿ ವೇಳೆ ಕಾರ್ಮಿಕರೊಬ್ಬರು ಮೂರ್ಛೆ ಬಂದು ಕೆಳಗೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ದಿಲೀಪ್ ಬಿಲ್ಡ್ ಕಂಪನಿಯ ಕಾರ್ಮಿಕ ಪಶ್ಚಿಮ ಬಂಗಾಳದ ರಬಿ ಉಲ್ ಇಸ್ಮಾಯಿಲ್(42) ಮೃತಪಟ್ಟ ವ್ಯಕ್ತಿ. ಸೇತುವೆ ಕಾಮಗಾರಿ ಕೆಲಸ ನಿರ್ವಹಿಸುವ ವೇಳೆ ಮೂರ್ಛೆ ಬಂದು ಕೆಳಗೆ ಬಿದ್ದಿದ್ದ ಅವರನ್ನು ತುರ್ತು ಚಿಕಿತ್ಸೆಗಾಗಿ ಸಾಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ನಾರಾಯಣ ಹೃದಯಾಲಯ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಮೃತ ಕಾರ್ಮಿಕನ ಸಹೋದರ ತಾಜಿನ್ ಅಲಿ ಸಾಗರ ಗ್ರಾಮಂತರ ಠಾಣೆಗೆ ದೂರು ನೀಡಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...