alex Certify 11,136 ಪೌರ ಕಾರ್ಮಿಕರ ಕಾಯಂಗೆ ಅಧಿಸೂಚನೆ: 2 ನೇ ಹಂತದಲ್ಲಿ ಉಳಿದವರ ಸೇರ್ಪಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

11,136 ಪೌರ ಕಾರ್ಮಿಕರ ಕಾಯಂಗೆ ಅಧಿಸೂಚನೆ: 2 ನೇ ಹಂತದಲ್ಲಿ ಉಳಿದವರ ಸೇರ್ಪಡೆ

 ಬೆಂಗಳೂರು: ರಾಜ್ಯದ 11,136 ಪೌರ ಕಾರ್ಮಿಕರ ಕಾಯಂಗೆ ಅಧಿಸೂಚನೆ ಹೊರಡಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಂಬೇಡ್ಕರ್ ಭವನ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ರಾಜ್ಯದ 11,136 ಪೌರ ಕಾರ್ಮಿಕರಿಗೆ ಕಾಯಂ ನೌಕರಿ ನೀಡಲು ಅಧಿಸೂಚನೆ ಹೊರಡಿಸಲಾಗಿದ್ದು, ಉಳಿದವರಿಗೆ ಎರಡು ಮತ್ತು ಮೂರನೇ ಹಂತದಲ್ಲಿ ಕಾಯಂಗೊಳಿಸಲಾಗುವುದು ಎಂದು ಹೇಳಿದ್ದಾರೆ.

ಬೆಂಗಳೂರು ಹಾಗೂ ಬೆಂಗಳೂರಿನ ಹೊರಗೆ ಪೌರಕಾರ್ಮಿಕರನ್ನು ಸರ್ಕಾರಿ ನೌಕರರನ್ನಾಗಿ ಮಾಡಲು ಎಲ್ಲಾ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಪೌರಕಾರ್ಮಿಕರ ಆಪತ್ತು ನಿಧಿಯನ್ನು 2,000 ರೂ.ಗಳಿಗೆ ಹೆಚ್ಚಿಸಲಾಗಿದೆ ಪೌರಕಾರ್ಮಿಕರ ಕಾಯಂಗೊಳಿಸಲು ರಚನೆ ಮಾಡಿದ್ದ ಸಮಿತಿ ಶಿಫಾರಸಿನಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...