alex Certify ಕಟ್ಟಡ ಕಾರ್ಮಿಕರು, ಅಸಂಘಟಿತ ಕಾರ್ಮಿಕ ವರ್ಗಕ್ಕೆ ಗುಡ್ ನ್ಯೂಸ್: ಪರಿಹಾರಕ್ಕಾಗಿ ಯಾರಿಗೂ ಹಣ, ದಾಖಲೆ ಕೊಡಬೇಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಟ್ಟಡ ಕಾರ್ಮಿಕರು, ಅಸಂಘಟಿತ ಕಾರ್ಮಿಕ ವರ್ಗಕ್ಕೆ ಗುಡ್ ನ್ಯೂಸ್: ಪರಿಹಾರಕ್ಕಾಗಿ ಯಾರಿಗೂ ಹಣ, ದಾಖಲೆ ಕೊಡಬೇಡಿ

ದಾವಣಗೆರೆ: ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಡಿಯಲ್ಲಿ ನೋಂದಾಯಿಸಿದ ಕಟ್ಟಡ ಕಾರ್ಮಿಕರಿಗೆ ಮತ್ತು ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕ ವರ್ಗಕ್ಕೆ ರಾಜ್ಯ ಸರ್ಕಾರ ಕೋವಿಡ್-19 ಪರಿಹಾರ ಪ್ಯಾಕೇಜ್ ಘೋಷಣೆ ಮಾಡಿರುತ್ತದೆ.

ರಾಜ್ಯ ಸರ್ಕಾರ ಕಾರ್ಮಿಕರ ಕಲ್ಯಾಣ ಮಂಡಳಿಯಡಿಯಲ್ಲಿ ನೋಂದಾಯಿಸಿದ ಕಟ್ಟಡ ಕಾರ್ಮಿಕರಿಗೆ 3000 ರೂ. ಮತ್ತು ಕರ್ನಾಟಕ ರಾಜ್ಯ ಅಸಂಘಟಿತ ಸಾಮಾಜಿಕ ಭದ್ರತಾ ಮಂಡಳಿಯಡಿಯಲ್ಲಿ ನೋಂದಾಯಿಸಿದ ಹಮಾಲರು, ಮನೆ ಕೆಲಸದವರು, ಚಿಂದಿ ಆಯುವವರು, ಟೈಲರ್‍ಗಳು, ಮೆಕ್ಯಾನಿಕ್, ಅಕ್ಕಸಾಲಿಗರು, ಅಗಸರು, ಕಮ್ಮಾರರು, ಭಟ್ಟಿ ಕಾರ್ಮಿಕರು ಮತ್ತು ಕ್ಷೌರಿಕರಿಗೆ 2000 ರೂ. ಕೋವಿಡ್-19 ಪರಿಹಾರ ಪ್ಯಾಕೇಜ್ ಘೋಷಣೆ ಮಾಡಿರುತ್ತದೆ.

ಪರಿಹಾರವನ್ನು ಪಡೆಯಲು ಕಾರ್ಮಿಕ ಇಲಾಖೆಯಿಂದ ಯಾವುದೇ ದಾಖಲೆಗಳನ್ನು ಸಂಗ್ರಹಿಸಲು ನಿರ್ದೇಶನ ನೀಡಿರುವುದಿಲ್ಲ. ಕೆಲವು ಮಧ್ಯವರ್ತಿಗಳು, ಸಂಘ ಸಂಸ್ಥೆಯವರು ಕಾರ್ಮಿಕರಿಂದ ಹಣ ಪಡೆದು ಗುರುತಿನ ಚೀಟಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್ ಪ್ರತಿಗಳನ್ನು ಪಡೆಯುತ್ತಿರುವ ಬಗ್ಗೆ ದೂರುಗಳು ಸ್ವೀಕೃತವಾಗುತ್ತಿವೆ. ಆದ್ದರಿಂದ, ಕಾರ್ಮಿಕರು ಯಾವುದೇ ದಾಖಲೆಗಳನ್ನು ಮತ್ತು ಹಣವನ್ನು ಮಧ್ಯವರ್ತಿಗಳಿಗೆ ಅಥವಾ ಕಾರ್ಮಿಕ ಸಂಘ ಸಂಸ್ಥೆಯವರಿಗೆ ನೀಡಬಾರದೆಂದು ದಾವಣಗೆರೆ ಜಿಲ್ಲಾ ಕಾರ್ಮಿಕ ಅಧಿಕಾರಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...