alex Certify ಜೈಲು ಅಧಿಕಾರಿಗಳ ಎಡವಟ್ಟು; ಜಾಮೀನು ಸಿಕ್ಕ ಕೈದಿಯ ಬದಲಿಗೆ ಮತ್ತೊಬ್ಬನ ಬಿಡುಗಡೆ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜೈಲು ಅಧಿಕಾರಿಗಳ ಎಡವಟ್ಟು; ಜಾಮೀನು ಸಿಕ್ಕ ಕೈದಿಯ ಬದಲಿಗೆ ಮತ್ತೊಬ್ಬನ ಬಿಡುಗಡೆ…!

Haryana health minister Anil Vij . (HT File Photo)

ಹರಿಯಾಣದಲ್ಲಿ ಜೈಲು ಅಧಿಕಾರಿಗಳು ದೊಡ್ಡ ಎಡವಟ್ಟೊಂದನ್ನು ಮಾಡಿದ್ದಾರೆ. ಅಲ್ಲಿನ ಅಂಬಾಲ ಜೈಲಿನಲ್ಲಿದ್ದ ಓರ್ವ ಕೈದಿಗೆ ಜಾಮೀನು ಸಿಕ್ಕಿದ್ದು, ಆದರೆ ದಾಖಲೆ ಪತ್ರಗಳನ್ನು ಪರಿಶೀಲಿಸದೆ ಮತ್ತೊಬ್ಬನನ್ನು ಬಿಡುಗಡೆ ಮಾಡಿದ್ದಾರೆ.

ಡಿಸೆಂಬರ್ 12ರಂದು ಈ ಘಟನೆ ಬೆಳಕಿಗೆ ಬಂದಿದ್ದು, ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದ ಓರ್ವ ಕೈದಿಗೆ ಜಾಮೀನು ಮಂಜೂರಾಗಿತ್ತು. ಆದರೆ ಆತನ ಬದಲಿಗೆ ಮತ್ತೊಬ್ಬನನ್ನು ಬಿಡುಗಡೆ ಮಾಡಿದ್ದು, ಈ ವಿಚಾರವನ್ನು ಬಂಧಿಖಾನೆ ಸಚಿವ ರಂಜಿತ್ ಸಿಂಗ್ ಚೌಟಾಲ ಒಪ್ಪಿಕೊಂಡಿದ್ದಾರೆ.

ಇನ್ನು ಇದೇ ವಿಚಾರದ ಕುರಿತಂತೆ ಮಾತನಾಡಿರುವ ಗೃಹ ಸಚಿವ ಅನಿಲ್ ವಿಜ್, ಜೈಲು ಅಧಿಕಾರಿಗಳು ದೊಡ್ಡ ಪ್ರಮಾದ ಎಸಗಿದ್ದಾರೆ. ಘಟನೆ ಕುರಿತು ಸಮಗ್ರ ತನಿಖೆ ನಡೆಸುವುದರ ಜೊತೆಗೆ ಕರ್ತವ್ಯ ಲೋಪಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...