alex Certify ಕಂದಕಕ್ಕೆ ಬಿದ್ದ ಖಾಸಗಿ ಬಸ್: ಪ್ರಯಾಣಿಕ ಸಾವು, 25ಕ್ಕೂ ಅಧಿಕ ಮಂದಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಂದಕಕ್ಕೆ ಬಿದ್ದ ಖಾಸಗಿ ಬಸ್: ಪ್ರಯಾಣಿಕ ಸಾವು, 25ಕ್ಕೂ ಅಧಿಕ ಮಂದಿಗೆ ಗಾಯ

ಯಾದಗಿರಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಕಂದಕಕ್ಕೆ ಉರುಳಿ ಬಿದ್ದು ಒಬ್ಬರು ಸಾವನ್ನಪ್ಪಿದ್ದಾರೆ. ಬಸ್ ನಲ್ಲಿದ್ದ 25 ಜನರಿಗೆ ಗಾಯಗಳಾಗಿದ್ದು, ಕಲಬುರಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ದೇವಪುರ ಬಳಿ ಅಪಘಾತ ಸಂಭವಿಸಿದೆ. ಬಸ್ ನಲ್ಲಿದ್ದ ಪ್ರಯಾಣಿಕ ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಹಳ್ಳಿಖೇಡ ನಿವಾಸಿ ಬಾಲುಕುಮಾರ(36) ಮೃತಪಟ್ಟವರು ಎಂದು ಹೇಳಲಾಗಿದೆ. ನಿನ್ನೆ ರಾತ್ರಿ ಬೀದರ್ ನಿಂದ ಬೆಂಗಳೂರಿಗೆ ಬಸ್ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...