alex Certify ಶಾಸಕ ಯತ್ನಾಳ್ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದಾರೆ : ಸಚಿವ ಎಂ.ಬಿ ಪಾಟೀಲ್ ಕಿಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಸಕ ಯತ್ನಾಳ್ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದಾರೆ : ಸಚಿವ ಎಂ.ಬಿ ಪಾಟೀಲ್ ಕಿಡಿ

ಬೆಂಗಳೂರು : ಬಿಜೆಪಿ ಶಾಸಕ ಯತ್ನಾಳ್ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದಾರೆ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯಗೆ ಧಮ್ ಇದ್ದರೆ ಮೌಲ್ವಿ ಪ್ರಕರಣ ‘NIA’ ಗೆ ವಹಿಸಲಿ ಎಂದು ಬಿಜೆಪಿ ಶಾಸಕ ಯತ್ನಾಳ್ ಸವಾಲ್ ಹಾಕಿದ್ದರು. ಇದಕ್ಕೆ ಸಚಿವ ಎಂ.ಬಿ ಪಾಟೀಲ್ ತಿರುಗೇಟು ನೀಡಿದ್ದಾರೆ.

ತನ್ವೀರ್ ಪೀರಾ ಅವರು ಯಾವ ಉಗ್ರ ಸಂಘಟನೆಯೊಂದಿಗೂ ಸಂಬಂಧ ಹೊಂದಿಲ್ಲ. ಬೇಕಿದ್ದರೆ ಎನ್ಐಎ ತನಿಖೆಗೆ ಕೊಡಲಿ. ಯತ್ನಾಳ್ ಹಾಗೂ ತನ್ವೀರ್ ಪೀರಾ ಕುಟುಂಬಸ್ಥರ ಜೊತೆ ಉದ್ಯಮಗಳು ಇದ್ದವು. ಹೋಟೆಲ್ ಹಾಗೂ ಇನ್ನಿತರೆ ಉದ್ಯಮದಲ್ಲಿ ಇವರೊಟ್ಟಿಗೆ ಅನೇಕರು ಪಾಲುದಾರರಾಗಿದ್ದರು. ಯತ್ನಾಳ್ ಸುಖಾ ಸುಮ್ಮನೆ ಆರೋಪ ಮಾಡುತ್ತಿದ್ದಾರೆ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.ಒಂದು ವೇಳೆ ಎನ್ ಐ ಎ ತನಿಖೆಗೆ ಕೊಟ್ಟು ಆರೋಪ ಸುಳ್ಳಾದರೆ ಯತ್ನಾಳ್ ಏನು ಮಾಡುತ್ತಾರೆ ಎಂಬುದನ್ನು ಹೇಳಲಿ ಎಂದು ಹೇಳಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...