alex Certify ರಾಜಕೀಯ ನಿವೃತ್ತಿ ಎಂದು ಎಲ್ಲೂ ಹೇಳಿಲ್ಲ; ಯಡಿಯೂರಪ್ಪನವರ ಮಹತ್ವ ಹೈಕಮಾಂಡ್ ಗೆ ಗೊತ್ತಿದೆ: ಸಿಎಂ ಬೊಮ್ಮಾಯಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜಕೀಯ ನಿವೃತ್ತಿ ಎಂದು ಎಲ್ಲೂ ಹೇಳಿಲ್ಲ; ಯಡಿಯೂರಪ್ಪನವರ ಮಹತ್ವ ಹೈಕಮಾಂಡ್ ಗೆ ಗೊತ್ತಿದೆ: ಸಿಎಂ ಬೊಮ್ಮಾಯಿ

ನವದೆಹಲಿ: ಯಡಿಯೂರಪ್ಪನವರು ರಾಜಕೀಯ ನಿವೃತ್ತಿ ಎಂದು ಎಲ್ಲೂ ಹೇಳಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ನವದೆಹಲಿಯಲ್ಲಿ ಮಾತನಾಡಿದ ಸಿಎಂ, ಯಡಿಯೂರಪ್ಪನವರು ನಿರಂತರವಾಗಿ ಹೋರಾಟದಿಂದ ಬಂದವರು. ಬೆಂಗಳೂರಿಗೆ ಹೋದ ನಂತರ ಅವರೊಂದಿಗೆ ಮಾತನಾಡುತ್ತೇನೆ. ಯಡಿಯೂರಪ್ಪ ಭಾರತೀಯ ಜನತಾ ಪಕ್ಷದ ಶಕ್ತಿಯಾಗಿದ್ದಾರೆ. ಮುಂದಿನ ಚುನಾವಣೆಗೆ ಯಡಿಯೂರಪ್ಪನವರ ಮಾರ್ಗದರ್ಶನ ಇದ್ದೇ ಇರುತ್ತದೆ. ಯಡಿಯೂರಪ್ಪನವರ ಮಹತ್ವ ಏನೆಂಬುದು ಹೈಕಮಾಂಡ್ ಗೆ ಗೊತ್ತಿದೆ ಎಂದು ಹೇಳಿದ್ದಾರೆ.

ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಅವರನ್ನು ದೆಹಲಿಯ ಒಡಿಶಾ ಭವನದಲ್ಲಿ ಭೇಟಿಯಾದ ಸಿಎಂ ಅಭಿನಂದನೆ ಸಲ್ಲಿಸಿದರು.

ಹಾಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಪ್ರಧಾನಿ ಮೋದಿ ಆಯೋಜಿಸಿರುವ ಭೋಜನಕೂಟದಲ್ಲಿ ಭಾಗಿಯಾಗಲು ಸಿಎಂ ದೆಹಲಿಗೆ ಆಗಮಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...