alex Certify ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ: ಯುವ ಕಾಂಗ್ರೆಸ್ ಮುಖಂಡ ಸೇರಿ ನಾಲ್ವರು ವಶಕ್ಕೆ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ: ಯುವ ಕಾಂಗ್ರೆಸ್ ಮುಖಂಡ ಸೇರಿ ನಾಲ್ವರು ವಶಕ್ಕೆ…?

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮನೆ ಮೇಲೆ ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಯುವ ಮುಖಂಡ ಪುನೀತ್ ನಾಯ್ಕ್ ಸೇರಿದಂತೆ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ.

ಶಿಕಾರಿಪುರ ಟೌನ್ ಪೋಲಿಸ್ ಠಾಣೆಯಲ್ಲಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಕ್ಕಾಂ ಹೂಡಿದ್ದು, ಪರಿಸ್ಥಿತಿ ಅವಲೋಕನ ನಡೆಸಿದ್ದಾರೆ.

ಎಸ್.ಸಿ. ಮೀಸಲಾತಿ ಹಂಚಿಕೆ ವಿರೋಧಿಸಿ ಬಂಜಾರ ಸಮುದಾಯ ಶಿಕಾರಿಪುರದಲ್ಲಿ ಕೈಗೊಂಡಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು. ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...