ಚುರುಕುಗೊಂಡ ಹಿಂಗಾರು ಮಾರುತ, ಮುಂದಿನ ವಾರ ಉತ್ತಮ ಮಳೆ

ಬೆಂಗಳೂರು: ಕ್ಷೀಣಿಸಿದ್ದ ಹಿಂಗಾರು ಮಾರುತಗಳು ಮತ್ತೆ ಚುರುಕುಗೊಂಡ ಪರಿಣಾಮ ರಾಜ್ಯದಲ್ಲಿ ಮುಂದಿನ ವಾರ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಭಾಗದಲ್ಲಿ ಮುಂದಿನ ಒಂದು ವಾರ ಉತ್ತಮ ಮಳೆಯಾಗುವ ಸಂಭವ ಇದೆ. ಮಲೆನಾಡು, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದೆ. ನವೆಂಬರ್ 24ರಂದು ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಂಭವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read