alex Certify ದುಷ್ಕರ್ಮಿಗಳಿಂದ C.P ಯೋಗೇಶ್ವರ್ ಬಾವ ಹತ್ಯೆ ಶಂಕೆ : ಚಾಮರಾಜನಗರದ ದಟ್ಟಾರಣ್ಯದಲ್ಲಿ ಪೊಲೀಸ್ ಕೂಂಬಿಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದುಷ್ಕರ್ಮಿಗಳಿಂದ C.P ಯೋಗೇಶ್ವರ್ ಬಾವ ಹತ್ಯೆ ಶಂಕೆ : ಚಾಮರಾಜನಗರದ ದಟ್ಟಾರಣ್ಯದಲ್ಲಿ ಪೊಲೀಸ್ ಕೂಂಬಿಂಗ್

ಚಾಮರಾಜನಗರ : ನಾಪತ್ತೆಯಾಗಿರುವ ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಬಾವ ಮಹದೇವಯ್ಯ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

ಪತ್ತೆಯಾದ ಕಾರಿನಲ್ಲಿ ರಕ್ತದ ಕಲೆ ಇರುವ ಹಿನ್ನೆಲೆ ದುಷ್ಕರ್ಮಿಗಳು ಯೋಗೇಶ್ವರ್ ಬಾವ ಅವರನ್ನು ಹತ್ಯೆ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ಸುಫಾರಿ ಕೊಟ್ಟು ಮೂವರು ದುಷ್ಕರ್ಮಿಗಳು ಅವರನ್ನು ಹತ್ಯೆ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ಈ ಹಿನ್ನೆಲೆ ಚಾಮರಾಜನಗರದ ದಟ್ಟಾರಣ್ಯದಲ್ಲಿ ಪೊಲೀಸರು ಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ದಟ್ಟಾರಣ್ಯದಲ್ಲಿ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ತಪಾಸಣೆ ನಡೆಸುತ್ತಿದ್ದಾರೆ.

ಕೃತ್ಯಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ನಡೆಸುತ್ತಿದ್ದಾರೆ. ಕೊಳ್ಳೇಗಾಲದ ಮಾರ್ಗದ ಡಾಬಾದಲ್ಲಿ ಪಾರ್ಟಿ ಮಾಡಿ ಹನೂರು ಬಳಿ ಮಹದೇವಯ್ಯ ಅವರನ್ನು ಕೊಂದು ಶವ ಎಸೆದಿರಬಹುದು ಎಂದು ಹೇಳಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...