ಆಂಧ್ರ ಪ್ರದೇಶದ ನೂತನ ರಾಜಧಾನಿಯಾಗಿ ವಿಶಾಖಪಟ್ಟಣಂ ಕಾರ್ಯ ನಿರ್ವಹಿಸಲಿದೆ ಎಂದು ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ ಘೋಷಿಸಿದ್ದಾರೆ. ಮುಖ್ಯಮಂತ್ರಿ ಕಛೇರಿ ಸೇರಿದಂತೆ ಹಲವು ಕಛೇರಿಗಳು ಅಲ್ಲಿಗೆ ಸ್ಥಳಾಂತರಗೊಳ್ಳಲಿದೆ.
ಅಮರಾವತಿಯನ್ನು ಆಂಧ್ರ ರಾಜಧಾನಿಯನ್ನಾಗಿ ಮಾಡಲು ಈ ಮೊದಲಿನಿಂದಲೂ ಜಗನ್ಮೋಹನ್ ರೆಡ್ಡಿ ವಿರೋಧಿಸಿಕೊಂಡು ಬಂದಿದ್ದು, ಇದೀಗ ವಿಶಾಖಪಟ್ಟಣದಿಂದಲೇ ಸರ್ಕಾರ ಕಾರ್ಯ ನಿರ್ವಹಿಸಲಿದೆ.
ವಿಶಾಖಪಟ್ಟಣದಲ್ಲಿ ಈಗಾಗಲೇ ಸರ್ಕಾರದ ಮುಖ್ಯ ಕಛೇರಿಗಳು ಕಾರ್ಯ ನಿರ್ವಹಿಸುತ್ತಿದ್ದು, ಇನ್ನೂ ಹಲವು ಪ್ರಮುಖ ಕಛೇರಿಗಳು ಸ್ಥಳಾಂತರಗೊಳ್ಳಲಿವೆ.