alex Certify ಡಿ.26 ರಿಂದ ʻಯುವನಿಧಿʼ ಯೋಜನೆ ನೋಂದಣಿ ಶುರು : ಅರ್ಜಿ ಸಲ್ಲಿಸಲು ಯಾರು ಅರ್ಹರು/ಅನರ್ಹರು? ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಿ.26 ರಿಂದ ʻಯುವನಿಧಿʼ ಯೋಜನೆ ನೋಂದಣಿ ಶುರು : ಅರ್ಜಿ ಸಲ್ಲಿಸಲು ಯಾರು ಅರ್ಹರು/ಅನರ್ಹರು? ಇಲ್ಲಿದೆ ಮಾಹಿತಿ

ಬೆಂಗಳೂರು : ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಗೆ ಡಿಸೆಂಬರ್‌ 26 ರಿಂದ ನೋಂದಣಿ ಶುರುವಾಗಲಿದ್ದು, ಡಿಪ್ಲೋಮಾ, ಪದವೀಧರರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.

ಡಿ.26 ರಂದು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಯುವನಿಧಿ ನೋಂದಣಿಗೆ ಚಾಲನೆ ನೀಡಲಿದ್ದಾರೆ, ಜನವರಿ 12 ರಿಂದ ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡಲಾಗುತ್ತದೆ.

ಯುವ ನಿಧಿ ನಿರುದ್ಯೋಗ ಭತ್ಯೆ ಯಾರಿಗೆ ಎಷ್ಟು?

. ಪದವೀಧರರಿಗೆ ಪ್ರತಿ ತಿಂಗಳು 3000 ರೂಪಾಯಿ

. ಡಿಪ್ಲೊಮೋ ಪದವೀಧರರಿಗೆ ಪ್ರತಿ ತಿಂಗಳು 1500 ರೂಪಾಯಿ

ಎಲ್ಲಿಯವರೆಗೆ ಸಿಗಲಿದೆ ಭತ್ಯೆ?

  • 2 ವರ್ಷದವರೆಗೆ ಅಥವಾ ಉದ್ಯೋಗ ಸಿಗುವವರೆಗೆ

ಯುವನಿಧಿ ಯೋಜನೆಗೆ ಬೇಕಿರುವ ದಾಖಲೆಗಳು

  • ಪದವಿ/ಡಿಪ್ಲೊಮೋ ಪ್ರಮಾಣಪತ್ರ
  • ಕರ್ನಾಟಕದಲ್ಲಿ ಕನಿಷ್ಠ 6 ವರ್ಷ ವಾಸವಿರುವ ದಾಖಲೆಗಳು

ರಾಜ್ಯದ ನಿರುದ್ಯೋಗಿ ಪದವೀಧರರಿಗೆ ನಿರುದ್ಯೋಗ ಭತ್ಯೆ ನೀಡುವ ಯೋಜನೆ

ಯಾರು ಅರ್ಹರು?

2023 ರಲ್ಲಿ ಪದವಿ/ಡಿಪ್ಲೊಮೋ ಪದವಿ ಪಡೆದು 6 ತಿಂಗಳಾದರೂ ಉದ್ಯೋಗ ಪಡೆಯದ ನಿರುದ್ಯೋಗಿ ಪದವೀಧರರು

ಯಾರು ಅನರ್ಹರು?

ಸರ್ಕಾರಿ / ಸರ್ಕಾರಿ ಅನುದಾನಿತ ಸಂಸ್ಥೆ / ಖಾಸಗಿ ವಲಯದ ಉದ್ಯೋಗ ಹೊಂದಿರುವ ಅಭ್ಯರ್ಥಿಗಳು

ಸ್ವಯಂ ಉದ್ಯೋಗ ಹೊಂದಿರುವ ಅಭ್ಯರ್ಥಿಗಳು

ವಿದ್ಯಾಭ್ಯಾಸ ಮುಂದುವರೆಸಿರುವ ಅಭ್ಯರ್ಥಿಗಳು

ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?

ಯುವನಿಧಿ ಯೋಜನೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಇದಕ್ಕಾಗಿ ನೀವು ಸೇವಾಸಿಂಧು ಪೋರ್ಟಲ್ https://sevasindhu.karnataka.gov.inಗೆ ಬೇಟಿ ನೀಡಬೇಕಾಗುತ್ತದೆ. ಡಿಸೆಂಬರ್ 26 ರಿಂದ ಸೇವಾ ಸಿಂಧು ಪೋರ್ಟಲ್ ಮೂಲಕ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...