alex Certify ಡಿಕೆಶಿಗೆ ಟಾಂಗ್ ಕೊಟ್ಟ ಜಮೀರ್ ಅಹ್ಮದ್ ಗೆ ಚುರುಕು ಮುಟ್ಟಿಸಲು ಒತ್ತಡ; ನೋಟಿಸ್ ಜಾರಿ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಿಕೆಶಿಗೆ ಟಾಂಗ್ ಕೊಟ್ಟ ಜಮೀರ್ ಅಹ್ಮದ್ ಗೆ ಚುರುಕು ಮುಟ್ಟಿಸಲು ಒತ್ತಡ; ನೋಟಿಸ್ ಜಾರಿ ಸಾಧ್ಯತೆ

ಬೆಂಗಳೂರು: ಸಿದ್ದರಾಮಯ್ಯ ಅವರೇ ಮುಂದಿನ ಮುಖ್ಯಮಂತ್ರಿ ಆಗಬೇಕು ಎಂದು ನಾಯಕತ್ವದ ವಿಚಾರವಾಗಿ ಹೇಳಿಕೆ ನೀಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಟಾಂಗ್ ಕೊಟ್ಟಿದ್ದ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ನೋಟಿಸ್ ನೀಡಲು ಪಕ್ಷದಲ್ಲಿ ಚರ್ಚೆ ನಡೆದಿದೆ ಎಂದು ಹೇಳಲಾಗಿದೆ.

ಪಕ್ಷದ ಶಿಸ್ತು ಸಮಿತಿ ಅಧ್ಯಕ್ಷ ಕೆ. ರೆಹಮಾನ್ ಖಾನ್ ಅವರನ್ನು ಸಂಪರ್ಕಿಸಿದ ಕೆಲವರು ನಾಯಕತ್ವಕ್ಕೆ ಸಂಬಂಧಿಸಿದಂತೆ ಜಮೀರ್ ಅಹ್ಮದ್ ಖಾನ್ ಪದೇ ಪದೇ ಹೇಳಿಕೆ ನೀಡುತ್ತಿದ್ದು, ಅವರಿಗೆ ಚುರುಕು ಮುಟ್ಟಿಸುವಂತೆ ಹೇಳಿದ್ದಾರೆ ಎನ್ನಲಾಗಿದೆ.

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕೆನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ. ಡಿ.ಕೆ. ಶಿವಕುಮಾರ್ ಸಿಟ್ಟಾದರೆ ನಾನೇನು ಮಾಡೋಕೆ ಆಗುತ್ತೆ ಎಂದು ಜಮೀರ್ ಅಹ್ಮದ್ ಖಾನ್ ಹೇಳುವ ಮೂಲಕ ಡಿ.ಕೆ. ಶಿವಕುಮಾರ್ ಗೆ ಮತ್ತೆ ಟಾಂಗ್ ಕೊಟ್ಟಿದ್ದಾರೆ.

ಹಿಂದೆ ಕೆಪಿಸಿಸಿ ಅಧ್ಯಕ್ಷರ ಮೇಲೆ ಗೌರವ ಇದೆ. ಅವರ ಮೇಲೆ ಗೌರವ ಇಲ್ಲ ಎಂದು ನಾನು ಎಂದೂ ಹೇಳಿಲ್ಲ. ಯಾವುದೇ ಒಂದು ಸಮುದಾಯದಿಂದ ಮುಖ್ಯಮಂತ್ರಿ ಆಗಲು ಸಾಧ್ಯವಿಲ್ಲ ಎಂದು ಜಮೀರ್ ಹೇಳಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...